ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ ಅಂತ ಹೇಳಿರುವುದರಲ್ಲಿ ತಪ್ಪೇನಿದೆ: ತಂದೆ ಪರ ಬ್ಯಾಟ್‌ ಬೀಸಿದ ಸೃಷ್ಟಿ ಪಾಟೀಲ್‌

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿಗಳು ಎಂದು ಹೇಳಿಕೆ ನೀಡುವ ಮೂಲಕ ವಿವಾದ ಮೇಲೆಳೆದುಕೊಂಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಅನೇಕ ರಾಜಕೀಯ ಮುಖಂಡರು ಕಿಡಿಕಾರುತ್ತಿದ್ದಾರೆ. ಕೃಷಿ ಸಚಿವರಾಗಿ ಇಂತಹ ಹೇಳಿಕೆ ನೀಡುವುದು ಶೋಭೆ ತರುವಂತದ್ದು ಅಲ್ಲ ಎನ್ನುತ್ತಿದ್ದಾರೆ. ಇನ್ನು ಸ್ವಪಕ್ಷ ಬಿಜೆಪಿಯಿಂದಲೇ ಟೀಕೆಗಳು ಕೇಳಿ ಬರುತ್ತಿದೆ. ಈ ಮಧ್ಯೆ ಇದೀಗ ತಂದೆಯ ಹೇಳಿಕೆ ಸಂಬಂಧಪಟ್ಟಂತೆ ಟ್ವೀಟ್‌ ಮಾಡಿರುವ ಪುತ್ರಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ ಅಂತ ಹೇಳಿರುವುದರಲ್ಲಿ ತಪ್ಪೇನಿದೆ. ಜೀವ ಮತ್ತು ಜೀವನ ಇರೋದೇ ಒಂದು. ಇದ್ದು ಜಯಿಸಬೇಕು ಹೊರತು ಆತ್ಮಹತ್ಯೆಯನ್ನು ಮಾಡಿಕೊಳ್ಳುವುದು ಸರಿ ಅಲ್ಲ. ಅವರು ರೈತರಾಗಲಿ ಅಥವಾ ಬೇರೆ ಯಾರೇ ಆಗಲಿ ಆತ್ಮಹತ್ಯೆಗೆ ಶರಣಾದಾಗ ಅವರ ಹೆಂಡತಿ ಮಕ್ಕಳು ಹಾಗೂ ಸಂಬಂಧಿಕರ ಗತಿ ಏನು??? ಎಂದು ಟ್ವೀಟ್ ಮಾಡುವ ಮೂಲಕ ಅಪ್ಪನ ಪರ ಬ್ಯಾಟಿಂಗ್ ಮಾಡಿದ್ದಾರೆ. ಅದನ್ನ ನೀವು ಟಿವಿ ಚಾನಲ್ ನವರು ತಿರುಚಿ ನಿಮಗೆ ಬೇಕಾದ ಹಾಗೆ ಹಾಕಿ, ನಿಮ್ಮ ಟಿ ಆರ್ ಪಿ ಗೋಸ್ಕರ ವಿವಾದವನ್ನು ನೀವೇ ಸೃಷ್ಟಿಸಿ ಚರ್ಚೆಗೆ ತಂದು ಖುಷಿ ಪಡುವಂತಹ ನಿಮ್ಮ ಮನಸ್ಥಿತಿಗೆ ಹ್ಯಾಟ್ಸ್‌ಪ್ ಎಂದಿದ್ದಾರೆ. ಕೊಡಗಿನಲ್ಲಿ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಕೃಷಿ ಸಚಿವ ಬಿಸಿ ಪಾಟೀಲ್‌, ಆತ್ಮಹತ್ಯೆ ಮಾಡುವ ರೈತರು ಹೇಡಿಗಳೆಂದು ಹೇಳಿ ವಿವಾದ ಮೇಲೆ ಎಳೆದುಕೊಂಡಿದ್ದರು. ಇವರ ಹೇಳಿಕೆಯನ್ನು ಖಂಡಿಸಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದರು.


from India & World News in Kannada | VK Polls https://ift.tt/3gavGQ8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...