ಬೆಂಗಳೂರು: ಕೊರೊನಾ 2ನೇ ಅಲೆ ಹರಡುವಿಕೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ಗುರುವಾರ ರಾತ್ರಿ 11 ರಿಂದ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಾಗಲಿದೆ. ಈ ಬಗ್ಗೆ ಸರಕಾರ ಈಗಾಗಲೇ ಆದೇಶ ಹೊರಡಿಸಿದ್ದು,ಇಂದು ರಾತ್ರಿಯಿಂದ ಕರ್ಫ್ಯೂ ಜಾರಿಗೊಳ್ಳಲಿದೆ. ಆದರೆ , , ಆಟೋ ರಿಕ್ಷಾಗಳು, ಕ್ಯಾಬ್ಗಳ ಸಂಚಾರವಿರಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಲಕ್ಷ್ಮಣ ಸವದಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಆಟೋ ರಿಕ್ಷಾಗಳು, ಕ್ಯಾಬ್ಗಳು ರಾತ್ರಿ ಎಂದಿನಂತೆ ಸಂಚಾರ ನಡೆಸಲಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಈ ಬಗ್ಗೆ ಬೆಳಗಾವಿಯಲ್ಲಿ ಒಂದು ಬಾರಿ ಸ್ಪಷ್ಟನೆ ನೀಡಿದ್ದ ಸಚಿವರು, ರಾಜ್ಯ ರಸ್ತೆ ಸಾರಿಗೆ ಬಸ್ಗಳ ಸಂಚಾರಕ್ಕೆ ಯಾವುದೇ ತೊಂದರೆ ಅಥವಾ ವ್ಯತ್ಯಯ ಆಗುವುದಿಲ್ಲ ಎಂದಿದ್ದರು. ಸಾರಿಗೆ ಬಸ್ಗಳ ಸಂಚಾರದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದರು. ರಾತ್ರಿ ಹೊರಡುವ ಬಸ್ಗಳಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಸರಕು ಸಾಗಣೆ ವಾಹನಗಳು ಓಡಾಡಲಿವೆ. ಯಥಾಸ್ಥಿತಿ ಮುಂದುವರಿಯಲಿದೆ ಎಂದಿದ್ದರು. ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆ ಇಂದು ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆ ವರೆಗೆ ರಾಜ್ಯದಲ್ಲಿ ಜಾರಿಯಾಗಲಿದೆ. ಇದಕ್ಕೆ ಟ್ಯಾಕ್ಸಿ ಮಾಲೀಕರ ಸಂಘ ಹಾಗೂ ಬಾರ್ಗಳ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ವಲಯದಿಂದಲೂ ತೀವ್ರ ಟೀಕೆ ವ್ಯಕ್ತವಾಗಿದೆ. ಇನ್ನು ಕಾಂಗ್ರೆಸ್ ರಾತ್ರಿ ಹೊತ್ತು ಕೊರೊನಾ ತಿರುಗಾಡಲು ಅದೇನೂ ಗೂಬೆಯಾ? ಎಂದು ಕಾಂಗ್ರೆಸ್ ಟೀಕಿಸಿದೆ.
from India & World News in Kannada | VK Polls https://ift.tt/37LbT71