ಭೋಪಾಲ್: ವಿರುದ್ಧ ಮತ್ತೊಂದು ರಾಜ್ಯ ತೊಡೆತಟ್ಟಿದ್ದು, ಬಲವಂತದ ಧಾರ್ಮಿಕ ಮತಾಂತರ ವಿರೋಧಿ ಮಸೂದೆಯನ್ನು ಕ್ಯಾಬಿನೆಟ್ ಶನಿವಾರ ಅಂಗೀಕರಿಸಿದೆ. ಈ ಮಸೂದೆ ಜಾರಿಗೆ ಬಂದರೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡವನ್ನು ವಿಧಿಸುವ ಅವಕಾಶವನ್ನು ಮಸೂದೆ ನೀಡಿದೆ. ಪ್ರಕರಣದಲ್ಲಿ ಆರೋಪಿಯಷ್ಟೇ ಅಲ್ಲದೇ ಆತನ ಹಿಂದೆ ಇರುವ ಸಂಘಟನೆಗಳು ಮತ್ತು ಸಂಸ್ಥೆಗಳ ಮೇಲೆಯೂ ದೋಷಾರೋಪ ಮಾಡಬಹುದಾಗಿದೆ. ತಿಂಗಳಾಂತ್ಯದಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುತ್ತದೆ. ಅದಾದ ಬಳಿಕ ರಾಜ್ಯಪಾಲರ ಅಂಕಿತ ಬಿದ್ದರೆ ಕಾನೂನಾಗಿ ಮಸೂದೆ ಜಾರಿಗೆ ಬರಲಿದೆ. ವಿಧಾನಸಭೆ ಅಧಿವೇಶನಕ್ಕೂ ಮುಂಚೆ ಶನಿವಾರ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಅದರಲ್ಲಿ ಧರ್ಮ ಸ್ವಾತಂತ್ರ್ಯ ಮಸೂದೆ 2020ನ್ನು ಅಂಗೀಕರಿಸಲಾಯಿತು. ಹೊಸ ಮಸೂದೆಯಡಿ, ಒತ್ತಾಯಪೂರ್ವಕ ಮತಾಂತರ ಮಾಡಿದರೆ 1 ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ. ದಂಡ ವಿಧಿಸಲಾಗುವುದು ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಅದರಲ್ಲೂ ಮತಾಂತರಗೊಂಡವರು ಎಸ್ಸಿ ಅಥವಾ ಎಸ್ಟಿಗೆ ಸೇರಿದ್ದರೆ 2 ರಿಂದ 10 ವರ್ಷಗಳ ಜೈಲು ಶಿಕ್ಷೆ ಹಾಗೂ ಗರಿಷ್ಠ 1 ಲಕ್ಷ ರೂ. ದಂಡ ವಿಧಿಸಬಹುದಾಗಿದೆ. ತಮ್ಮ ಧರ್ಮವನ್ನು ಬದಲಾಯಿಸಲು ಇಚ್ಛಿಸುವವರು ಎರಡು ತಿಂಗಳ ಮುಂಚೆಯೇ ತಿಳಿಸಬೇಕಾಗುತ್ತದೆ. ಅದು ವಿಫಲವಾದರೆ ಮದುವೆಯನ್ನು ಹೊಸ ಕಾನೂನಿನ ಪ್ರಕಾರ ಅನೂರ್ಜಿತವೆಂದು ಪರಿಗಣಿಸಲಾಗುತ್ತದೆ. ಈ ತಿಂಗಳ ಆರಂಭದಲ್ಲಿ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರಕಾರ ಲವ್ ಜಿಹಾದ್ ವಿರೋಧಿ ಕಾನೂನು ಜಾರಿಗೆ ತಂದ ಹಲವು ತಿಂಗಳುಗಳ ಬಳಿಕ ಮಧ್ಯಪ್ರದೇಶದಲ್ಲಿ ಧರ್ಮ ಸ್ವಾತಂತ್ರ್ಯ ಮಸೂದೆಯನ್ನು ತರಲಾಗುತ್ತಿದೆ. ಉತ್ತರಪ್ರದೇಶದಲ್ಲಿ ಹೊಸ ಕಾನೂನಿನ ದುರ್ಬಳಕೆಯ ಬಗ್ಗೆ ದೂರುಗಳು ಬರುತ್ತಿದ್ದು, ಹೊಸ ಕಾನೂನಿಗೆ ಅಲ್ಲಿ ವಿರೋಧ ವ್ಯಕ್ತವಾಗಿದೆ.
from India & World News in Kannada | VK Polls https://ift.tt/3hhtt5I