ಹೊಸದಿಲ್ಲಿ: ನಾಯಕತ್ವವನ್ನು ಸದಾ ಪ್ರಶ್ನಿಸುತ್ತಿದ್ದ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ , ಇದೀಗ ಓಡಿಐ ಕ್ರಿಕೆಟ್ನಲ್ಲಿ ವೇಗವಾಗಿ 12,000 ರನ್ಗಳ ನೂತನ ಮೈಲುಗಲ್ಲು ಸ್ಥಾಪಿಸಿರುವ ಟೀಮ್ ಇಂಡಿಯಾ ನಾಯಕನನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಬುಧವಾರ ಕ್ಯಾನ್ಬೆರಾದ ಮನುಕಾ ಓವಲ್ ಮೈದಾನದಲ್ಲಿ ನಡೆದಿದ್ದ ವಿರುದ್ಧದ ಮೂರನೇ ಹಾಗೂ ಅಂತಿಮ ಓಡಿಐ ಪಂದ್ಯದಲ್ಲಿ 63 ರನ್ಗಳನ್ನು ಸಿಡಿಸುವ ಮೂಲಕ ಕೊಹ್ಲಿ ಈ ಸಾಧನೆಗೆ ಭಾಜನರಾಗಿದ್ದರು. ಆ ಮೂಲಕ ಮಾಸ್ಟರ್ ಬ್ಲಾಸ್ಟರ್ ಅವರ 17 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದರು. ವೇಗವಾಗಿ 12,000 ರನ್ಗಳನ್ನು ಗಳಿಸಲು ಕೊಹ್ಲಿ 241 ಇನಿಂಗ್ಸ್ಗಳನ್ನು ತೆಗೆದುಕೊಂಡಿದ್ದಾರೆ. 12,000 ರನ್ಗಳ ಸಾಧನೆಯನ್ನು ಮಾಡಲು ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ 300 ಇನಿಂಗ್ಸ್ಗಳಲ್ಲಿ ಆಡಿದ್ದಾರೆ. ಟೆಸ್ಟ್, ಏಕದಿನ ಹಾಗೂ ಟಿ20 ಮುರೂ ಸ್ವರೂಪದ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನ ಅಭೂತಪೂರ್ವವಾಗಿದೆ ಹಾಗೂ ದೇಶಕ್ಕೆ ಅವರು ನೀಡಿರುವ ಕೊಡುಗೆ ಪ್ರತಿಯೊಬ್ಬರಿಗೂ ಸ್ಪೂರ್ತಿಯನ್ನು ತುಂಬುತ್ತದೆ ಎಂದು ಗೌತಮ್ ಗಂಭೀರ್ ದಿಲ್ಲಿ ಮೂಲದ ಬ್ಯಾಟ್ಸ್ಮನ್ ಸಾಧನೆಯನ್ನು ಮೆಚ್ಚಿದರು. "ನೀವು ಏನು ಬೇಕಾದರೂ ತೆಗೆದುಕೊಳ್ಳಬಹುದು, ನೀವು ನಿಜವಾಗಿ ನಿಮಗೆ ಬೇಕಾದುದನ್ನು ಮಾಡಬಹುದು, ಆದರೆ ನೀವು ಕೊನೆಯ ರನ್ ಗಳಿಸಿ ಹೊಟೇಲ್ ಕೊಠಡಿಗೆ ಮರಳಿದಾಗ, ದೇಶಕ್ಕಾಗಿ ಏನನ್ನಾದರೂ ಮಾಡಿದ್ದೀರಿ ಎಂಬದು ತೃಪ್ತರಾದಾಗ ಅದು ವಿಶ್ವದಲ್ಲಿಯೇ ಅತ್ಯುತ್ತಮ ಭಾವನೆಯಾಗಿರುತ್ತದೆ," ಎಂದು ಸ್ಟಾರ್ ಸ್ಪೋರ್ಟ್ಸ್ ಕ್ರಿಕೆಟ್ ಕನೆಕ್ಟೆಡ್ ಚಾಟ್ ಶೋನಲ್ಲಿ ಗಂಭೀರ್ ಹೇಳಿದರು. "ವಿರಾಟ್ ಕೊಹ್ಲಿ ಏನೆಂಬುದನ್ನು ಅವರು ತೋರಿರುವ ಸಂಯೋಜನೆಯಿಂದ ತಿಳಿಯುತ್ತದೆ. ಅವರಿಗೆ ನನ್ನ ಕಡೆಯಿಂದ ಹ್ಯಾಟ್ಸ್ ಆಫ್. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹಲವು ಶತಕಗಳು ಸೇರಿದಂತೆ 20,000 ಕ್ಕೂ ಹೆಚ್ಚು ರನ್ಗಳನ್ನು ಗಳಿಸಿದ್ದಾರೆ," ಎಂದು ಗೌತಮ್ ಗಂಭೀರ್ ಟೀಮ್ ಇಂಡಿಯಾ ನಾಯಕ ಕ್ರಿಕೆಟ್ ವೃತ್ತಿ ಜೀವನವನ್ನು ಶ್ಲಾಘಿಸಿದರು. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಸೋಲು ಅನುಭವಿಸಿತು. ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಭಾರತ, ಕೊನೆಯ ಪಂದ್ಯದಲ್ಲಿ 13 ರನ್ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಆಸೀಸ್ ಎದುರು ಓಡಿಐ ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಿಕೊಂಡಿತು. ಏಕದಿನ ಸರಣಿಯನ್ನು ಮುಗಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು, ಶುಕ್ರವಾರದಿಂದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3g8tMiD