
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವ ವಿಚಾರ ಬಿಜೆಪಿ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಿಪಿವೈಗೆ ಸಚಿವ ಸ್ಥಾನ ನೀಡಿಯೇ ಸಿದ್ದ ಎಂಬ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆಯಿಂದ ಆಘಾತವಾಗಿದೆ ಎಂದು ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಸಿ.ಪಿ ಯೋಗೇಶ್ವರ್ ಯಾರು, ಮೋದಿನಾ? ಅಮಿತ್ ಶಾನಾ ಅಥವಾ ಜೆಪಿ ನಡ್ಡಾನಾ? ಎಂದು ಪ್ರಶ್ನಿಸಿದರು. ಪದೇ ಪದೇ ಅವರ ಹೆಸರನ್ನು ನನ್ನ ಬಾಯಲ್ಲಿ ಏಕೆ ಹೇಳಿಸುತ್ತೀರಿ ಎಂದು ಗರಂ ಆದರು. ಸಿಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವ ಕುರಿತಾಗಿ ಬಿಎಸ್ ಯಡಿಯೂರಪ್ಪ ನೀಡಿರುವ ಹೇಳಿಕೆಯಿಂದ ಮನಸ್ಸಿಗೆ ಆಘಾತವಾಗಿದೆ. ಶಾಸಕಾಂಗ ಸಭೆಯಲ್ಲಿ ಎಲ್ಲವನ್ನೂ ಮಾಡನಾಡುತ್ತೇವೆ ಎಂದರು. ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ್ದ ಅವರು ನೂರಕ್ಕೆ ನೂರರಷ್ಟು ಅವರನ್ನು ಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಸಿಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವುದು ಬಿಎಸ್ವೈ ಆಪ್ತರ ಅಸಮಾದಾನಕ್ಕೆ ಕಾರಣವಾಗಿದೆ. ಎಂಪಿ ರೇಣುಕಾಚಾರ್ಯ, ರಾಜೂಗೌಡ ಸೇರಿದಂತೆ ಕೆಲವು ಶಾಸಕರು ಸಿಪಿವೈಗೆ ಸಚಿವ ಸ್ಥಾನ ನೀಡಲು ವಿರೋಧ ವ್ಯಕ್ತಪಡಿಸಿದ್ದರು.
from India & World News in Kannada | VK Polls https://ift.tt/2KYFZuZ