ಕರ್ನಾಟಕ ಬಂದ್: ಜನರಿಗೆ ತೊಂದರೆ ಕೊಡಬೇಡಿ, ಕನ್ನಡ ಪರ ಸಂಘಟನೆಗಳಿಗೆ ಬಿಎಸ್‌ವೈ ಮನವಿ

ಬೆಂಗಳೂರು: ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿರೋಧಿಸಿ ಮಾಡಿ ಜನರಿಗೆ ತೊಂದರೆ ಕೊಡಬೇಡಿ ಎಂದು ಮುಖ್ಯಮಂತ್ರಿ ಕನ್ನಡ ಪರ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬಂದ್ ನಡೆಸುವ ಅಗತ್ಯ ಇಲ್ಲ ಎಲ್ಲ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ ಎಂದರು. ಕನ್ನಡಕ್ಕಾಗಿ ಏನೇನು ಆದ್ಯತೆ ಕೊಡಬೇಕು ಅದನ್ನು ಕೊಟ್ಟಿದ್ದೇನೆ, ಇನ್ನು ಏನು ಮಾಡಬೇಕು ಅದನ್ನು ಮಾಡಲು ಸಿದ್ದನಿದ್ದೇನೆ ಎಂಬ ಭರವಸೆಯನ್ನು ನೀಡಿದರು. ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಬಂದ್‌ಗೆ ರಾಜ್ಯದಲ್ಲಿ ಅವಕಾಶ ಇಲ್ಲ, ಎಲ್ಲರು ಸಹಕಾರ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಮರಾಠಿ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್ ಕರೆ ಕೊಟ್ಟಿವೆ. ಬೆಳಗಾವಿ ಹಾಗೂ ಬಸವ ಕಲ್ಯಾಣ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ಮರಾಠಿ ಅಭಿವೃದ್ದಿ ರಚನೆ ಮಾಡುವ ಮೂಲಕ ಕನ್ನಡಕ್ಕೆ ದ್ರೋಹ ಮಾಡಲಾಗಿದೆ ಎಂಬುವುದು ಕನ್ನಡ ಪರ ಹೋರಾಟಗಾರರ ಆರೋಪವಾಗಿದೆ. ಈ ಕಾರಣದಿಂದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಬಂದ್ ಕರೆ ನೀಡಿವೆ. ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.


from India & World News in Kannada | VK Polls https://ift.tt/3mLBmCE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...