ಕಾಂಗ್ರೆಸ್‌ಗೆ ಸ್ಮೃತಿ ಇರಾನಿ ವಾರ್ನಿಂಗ್ ಏನು?: ಗಾಂಧಿ ಕುಟುಂಬಕ್ಕೆ ರಾಯ್‌ಬರೇಲಿ ಕೈ ತಪ್ಪುವ ಎಚ್ಚರಿಕೆ!

ಅಮೆಥಿ: ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ, ರಾಯಬರೇಲಿ ಕ್ಷೇತ್ರವನ್ನೂ ಗಾಂಧಿ ಪರಿವಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಸಚಿವೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅಮೆಥಿಯಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಸ್ಮೃತಿ ಇರಾನಿ, ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ 2024ರ ಲೋಕಸಭಾ ಚುನಾವಣೆಯಲ್ಲಿ ರಾಯ್‌ಬರೇಲಿ ಕ್ಷೇತ್ರವೂ ಗಾಂಧಿ ಪರಿವಾರ ಕೈತಪ್ಪಲಿದೆ ಎಂದು ಸ್ಮೃತಿ ಇರಾನಿ ಎಚ್ಚರಿಸಿದ್ದಾರೆ. ಅಮೆಥಿಯಲ್ಲಿ ರಾಹುಲ್ ಗಾಂಧಿ ಸೋತ ಬಳಿಕ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುವುದು ಹೆಚ್ಚಾಗಿದೆ. ಇದು ಹೀಗೆಯೇ ಮುಂದುವರೆದರೆ ಗಾಂದಿ ಪರಿವಾರದಿಂಧ ರಾಯ್‌ಬರೇಲಿ ಕ್ಷೇತ್ರವನ್ನೂ ನಾವು ಕಸಿದುಕೊಳ್ಳಬೇಕಾಗುತ್ತದೆ ಎಂದು ಸ್ಮೃತಿ ಇರಾನಿ ಎಚ್ಚರಿಸಿದರು. ಬಿಜೆಪಿ ಕಾರ್ಯಕರ್ತರನ್ನು ಹೆದರಿಸಿ ಸುಮ್ಮನೆ ಕೂರಿಸಬಹುದು ಎಂದು ಕಾಂಗ್ರೆಸ್ ಭಾವಿಸಿದ್ದಾರೆ. ಕಾಂಗ್ರೆಸ್ ಗೂಂಡಾಗಳ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಕಾರ್ಯಕರ್ತರೂ ಹೆದರುವುದೂ ಇಲ್ಲ ಎಂದು ಸ್ಮೃತಿ ಇರಾನಿ ಈ ವೇಳೆ ಹೇಳಿದರು. ಗಾಂಧಿ ಪರಿವಾರದ ಮೇಲೆ ನಿರಂತರವಾಗಿ ವಾಗ್ದಾಳಿ ಮಾಡುತ್ತಲೇ ಇರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಈ ಬಾರಿ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವುದು ಗಮನ ಸೆಳೆದಿದೆ.


from India & World News in Kannada | VK Polls https://ift.tt/3nRbHbX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...