ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ಬಂದ್‌ ಬಿಸಿ ಹೇಗಿದೆ? ಬಿಎಂಟಿಸಿ ಬಸ್‌ ಮೇಲೆ ಕಲ್ಲು ತೂರಾಟ!

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ. ಈ ಹಿನ್ನೆಲೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆಗಳು ನಡೆಯಲಿದೆ. ಮೈಸೂರು ಬ್ಯಾಂಕ್ ಸರ್ಕಲ್ನಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ರ‍್ಯಾಲಿ ನಡೆಸಿ ಪ್ರತಿಭಟಿಸಲಿವೆ. ಆದರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಕೆಲವು ಕಿಡಿಗೇಡಿಗಳು ಸರಕಾರಿ ಬಸ್‌ಗಳಿಗೆ ಕಲ್ಲು ತೂರಿ ವಿಕೃತಿ ಮೆರೆದಿದ್ದಾರೆ. ಹೊಸೂರು ರಸ್ತೆಯ ಹಳೆ ಚಂದಾಪುರ ಬಳಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಡಿಪೋ ನಂಬರ್ 32ಕ್ಕೆ ಸೇರಿದ ರೂಟ್ ನಂಬರ್ 600ರ ಬಸ್ ಮೇಲೆ ಕಲ್ಲು ತೂರಾಟವಾಗಿದೆ. ಇನ್ನು ಕಲ್ಲು ಬಿದ್ದ ರಭಸಕ್ಕೆ ಬಸ್ನ ಹಿಂಬದಿಯ ಗಾಜು ಹಾಗೂ ಸೈಡ್ ಮಿರರ್ ಪುಡಿ ಪುಡಿಯಾಗಿದೆ. ಇನ್ನು ನಗರದ ಪೈ ಲೇಔಟ್ನಲ್ಲೂ ಕೂಡ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಕೆ.ಆರ್.ಪುರಂನ ಪೈ ಲೇಔಟ್ನಲ್ಲಿಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಇಂದು ಮುಂಜಾನೆ ಆರು ಗಂಟೆಯಿಂದ ಬಂದ್ ಆರಂಭವಾಗಿದೆ. ಬಹುತೇಕ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೆ. ಹಲವೆಡೆ ಸಹಜ ಜೀವನ ಸ್ಥಿತಿ ಇದೆ. ಹೀಗಾಗಿ ಬಂದ್‌ ಯಶಸ್ವಿಯಾಗುವುದು ಬಹುತೇಕ ಡೌಟ್‌ ಎನ್ನುವ ಸ್ಥಿತಿ ಇದೆ. ಇನ್ನು ಬೆಂಗಳೂರಿನಲ್ಲಿ ಕೆಆರ್‌ ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆಗಳು ಎಂದಿನಂತೆ ತೆರೆದು ಕಾರ್ಯನಿರ್ವಹಿಸುತ್ತಿದೆ. ಮೆಜೆಸ್ಟಿಕ್‌ ಬಸ್‌ ಸ್ಟ್ಯಾಂಡ್‌ನಲ್ಲೂ ಬಸ್‌ಗಳು ಹಾಗೂ ಜನರು ಓಡಾಡುತ್ತಿದ್ದಾರೆ.


from India & World News in Kannada | VK Polls https://ift.tt/39HLOqO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...