ಹೊಸದಿಲ್ಲಿ: ಭಾರತವೂ ಸೇರಿದಂತೆ ಇಡೀ ವಿಶ್ವದಲ್ಲಿ ಏಸು ಕ್ರಿಸ್ತನ ಜನ್ಮದಿನದ ಅಂಗವಾಗಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸೇರಿ ಹಲವು ಗಣ್ಯರು ದೇಶದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಯೇಸು ಕ್ರಿಸ್ತನ ಜೀವನ ಹಾಗೂ ಸಂದೇಶ ಜಗತ್ತಿನ ಕೋಟ್ಯಂತರ ಜನರಿಗೆ ದಾರಿ ದೀಪವಾಗಿದೆ ಎಂದು ಹೇಳಿದ್ದಾರೆ. ಭಗವಾನ್ ಯೇಸು ಕ್ರಿಸ್ತ ತೋರಿಸಿಕೊಟ್ಟ ಶಾಂತಿಯ ಮಾರ್ಗದಲ್ಲಿ ನಡೆದು ಈ ಜಗತ್ತನ್ನು ಶಾಂತಿಯ ಗೂಡನ್ನಾಗಿ ಮಾಡೋಣ ಎಂದು ಪ್ರಧಾನಿ ಮೋದಿ ಈ ವೇಳೆ ಕರೆ ನೀಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ನಾಡಿನ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ್ದು, ಪ್ರೀತಿಯ ಮಹತ್ವದ ಸಾರಿದ ಯೇಸು ಕ್ರಿಸ್ತನ ಸಂದೇಶಗಳು ನಮ್ಮೆಲ್ಲರ ಜೀವನದಲ್ಲಿ ಹೊಸ ಭರವಸೆಯ ಬೀಜ ಬಿತ್ತಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ. ಇನ್ನು ಕ್ರಿಸ್ಮನಸ್ ಹಬ್ಬದ ಪ್ರಯುಕ್ತ ನಾಡಿನ ಜನತೆಗೆ ಶುಭಾಶಯ ಸಂದೇಶ ರವಾನಿಸಿರುವ ರಕ್ಷಣಾ ಸಚಿವ , ಈ ಬಾರಿಯ ಕ್ರಿಸ್ಮಸ್ ಎಲ್ಲರ ಜೀವನದಲ್ಲಿ ಸಂತೋಷ, ಶಾಂತಿ ಹಾಗೂ ಉತ್ತಮ ಆರೋಗ್ಯವನ್ನು ಹೊತ್ತು ತರಲಿ ಎಂದು ಹಾರೈಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ್ದು, ಕ್ರಿಸ್ಮಸ್ ಹಬ್ಬ ನಮ್ಮ ಜೀವನದಲ್ಲಿ ಶಾಂತಿ ಮತ್ತು ಸಹೋದರತ್ವವನ್ನು ಹೆಚ್ಚಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ. ಇನ್ನು ಯೇಸು ಕ್ರಿಸ್ತನ ಜನ್ಮದಿನದ ಅಂಗವಾಗಿ ದೇಶಾದ್ಯಂತ ಸಂಭ್ರಮದಿಂದ ಕ್ರಿಸ್ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಪ್ರಮುಖ ಚರ್ಚ್ಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.
from India & World News in Kannada | VK Polls https://ift.tt/37LjVwD