ಚಾಲನಾ ಸ್ಥಿತಿಯಲ್ಲೇ ಹೃದಯಾಘಾತ: ಹಿಂದಿನ ಕಾರಿನಲ್ಲಿದ್ದ ವೈದ್ಯೆಯ ತುರ್ತು ಸ್ಪಂದನೆ, ಅಪಾಯದಿಂದ ಪಾರು!

ತೊಕ್ಕೊಟ್ಟು: ಹೆದ್ದಾರಿಯಲ್ಲಿ ಕಾರು ಚಲಾಯಿಸುತ್ತಿರುವಾಗಲೇ ಹೃದಯಘಾತಕ್ಕೊಳಗಾದ ವ್ಯಕ್ತಿಯೊಬ್ಬರಿಗೆ ಹಿಂದಿನ ಕಾರಿನಲ್ಲಿದ್ದ ವೈದ್ಯೆಯೊಬ್ಬರು ತಕ್ಷಣ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮೀಪದ ರಾ.ಹೆ. 66ರ ಕಲ್ಲಾಪು ಎಂಬಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಪುತ್ತೂರಿನ ಅಭಿಷೇಕ್‌ (43) ಹೃದಯಘಾತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾದ ಅದೃಷ್ಟವಂತ. ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತನ್ನ ಮನೆಗೆ ಮರಳುತ್ತಿದ್ದಾಗ ಕಲ್ಲಾಪು ತಲುಪುತ್ತಿದ್ದಂತೆಯೇ ಚಾಲನಾ ಸ್ಥಿತಿಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡಿತು. ನೋವು ತಡೆಯಲಾರದೆ ಕಾರನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಹೆದ್ದಾರಿಯಲ್ಲಿ ವಾಹನಗಳೆಲ್ಲ ಇದ್ದಕ್ಕಿಂದ್ದಂತೆಯೇ ಸಾಲಾಗಿ ನಿಂತು ಬಿಟ್ಟಿತು. ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಸ್ಥಿತಿ ಅರ್ಥ ಮಾಡಿಕೊಂಡ ಹಿಂದಿನ ಕಾರಿನಲ್ಲಿದ್ದ ಕೆಎಂಸಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯೆಯೊಬ್ಬರು ತಕ್ಷಣ ಧಾವಿಸಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದರು. ಬಳಿಕ ಸಮೀಪದಲ್ಲಿಯೇ ಇರುವ ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ದಾಖಲಿಸಿದರು. ಇದೀಗ ಅಭಿಷೇಕ್ ಚೇತರಿಸಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಅನಿರೀಕ್ಷಿತ ಘಟನೆಯಿಂದ ರಾ.ಹೆ. 66ರಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರ ವ್ಯತ್ಯಯ ಉಂಟಾದರೂ, ಉಳ್ಳಾಲ ಹಾಗೂ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸಂಚಾರ ಸುಗಮಗೊಳಿಸಿದರು.


from India & World News in Kannada | VK Polls https://ift.tt/3qexmvE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...