ಮೈಸೂರು: ಕೆ.ಆರ್.ನಗರ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರ ಪುತ್ರ ಹರೀಶ್ ಗೌಡ ಸ್ಪರ್ಧಿಸಿದರೆ ನನ್ನದೇನೂ ಅಭ್ಯಂತರವಿಲ್ಲಎಂದು ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ. ಇತ್ತೀಚೆಗೆ ಕೆ.ಆರ್.ನಗರದ ಜೆಡಿಎಸ್ ಮುಖಂಡರು, ಹರೀಶ್ ಗೌಡ ಅವರನ್ನು ಭೇಟಿ ಮಾಡಿ ಅಭಿನಂದಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹರೀಶ್ಗೌಡ ಅವರು ಕೂಡ ಜೆಡಿಎಸ್ ಪಕ್ಷದಿಂದಲೇ ಬೆಳೆದವರು. ಕುಮಾರಸ್ವಾಮಿ ಮತ್ತು ರೇವಣ್ಣ ಅವರ ಸಹಕಾರ, ಪ್ರೋತ್ಸಾಹದಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದರು. ಈಗ ದೊಡ್ಡ ಮಟ್ಟದಲ್ಲಿ ಅಪೆಕ್ಸ್ ಬ್ಯಾಂಕಿನ ಉಪಾಧ್ಯಕ್ಷರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭೇಟಿ ಮಾಡಿ ಅಭಿನಂದಿಸುತ್ತಿದ್ದಾರೆ. ಒಂದು ವೇಳೆ ಕೆ.ಆರ್.ನಗರದಿಂದ ಸ್ಪರ್ಧಿಸುವುದಾರೆ ಹರೀಶ್ಗೌಡ ಸ್ಪರ್ಧಿಸಲಿ ಎಂದು ಹೇಳಿದರು. ಚುನಾವಣೆಗಳು ಮಹಾನ್ ನಾಯಕರನ್ನು ಸೋಲಿಸಿವೆ. ಕಡಿಮೆ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೆ.ಆರ್.ಕ್ಷೇತ್ರದ ಜನ ನನ್ನನ್ನು ಮೂರು ಬಾರಿ ಗೆಲ್ಲಿಸಿದ್ದಾರೆ. ನಮ್ಮಲ್ಲಿನ ವಿರೋಧದ ನಡುವೆ ನನ್ನನ್ನು ಗೆಲ್ಲಿಸಿದ್ದಾರೆ. ನನಗೂ ತೃಪ್ತಿ ಇದೆ. ಗೆಲುವಿನ ಅಂತರ ಕಡಿಮೆ ಇರಬಹುದು. ಆದರೆ, ಜನತೆ ಆಶೀರ್ವಾದ ಮಾಡಿದ್ದಾರೆ. ಆದ್ದರಿಂದ ಚಾಮರಾಜ ಕ್ಷೇತ್ರ ಸೇರಿದಂತೆ ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು. ಡಿಸಿ ಸ್ವಾಗತಿಸಬೇಕಿತ್ತು: ರಾತ್ರೋ ರಾತ್ರಿ ಪಕ್ಷವೊಂದರ ಅಧ್ಯಕ್ಷರನ್ನು ಭೇಟಿ ಮಾಡುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ವಿಧಾನ ಸಭಾ ಕಾಗದ ಪತ್ರಗಳ ಸಮಿತಿಯನ್ನು ಸ್ವಾಗತಿಸಲು ಬರಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
from India & World News in Kannada | VK Polls https://ift.tt/2LPbxUr