ಗಣರಾಜ್ಯೋತ್ಸವ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾರಿಂದ ಧ್ವಜಾರೋಹಣ

ಬೆಂಗಳೂರು: 72 ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಮಂಗಳವಾರ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲರು ಬಳಿಕ ಪೊಲೀಸ್ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿರು. ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣಕ್ಕೆ ಆಗಮಿಸಿದ ಅವರನ್ನು ರಕ್ಷಣಾ ಪಡೆಯ ಮೂವರು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.ಧ್ವಜಾರೋಹನ ನೆರವೇರಿಸಿದ ಬಳಿಕ ಮಾತನಾಡಿದ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 72 ನೇ ಗಣರಾಜ್ಯೀತ್ಸವದ ಹಿನ್ನೆಲೆಯಲ್ಲಿ ಕರ್ನಾಟಕದ ಜನತೆಗೆ ಶುಭಾಶಯ ಸಲ್ಲಿಸಿದ ಅವರು,ಕರ್ನಾಟಕ ಸರ್ಕಾರವು ಜನತೆಯ ಸಹಕಾರದೊಂದಿದೆ ಹಗಲಿರುಳು ಶ್ರಮಿಸಿ ಕೋವಿಡ್‌ ಅಲೆಯನ್ನು ತಗ್ಗಿಸುವುದರಲ್ಲಿ ಯಶಸ್ವಿಯಾಗಿದೆ. ಈ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಅವಕಾಶವನ್ನು ತಮ್ಮ ಸಾಮರ್ಥ್ಯ ವೃದ್ದಿಸಲು ಹಾಗೂ ಆರೋಗ್ಯ ಮೂಲಸೌಕರ್ಯ, ಪಿಪಿಇ ಕಿಟ್‌, ವೆಂಟಿಲೇಟರ್‌ ಉತ್ಪಾದನೆಯನ್ನು ಹೆಚ್ಚಿಸಲು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ದೂರದರ್ಶಿತ್ವ ಆತ್ಮ ನಿರ್ಭರ್‌ ಭಾರತ್ ಕಾರ್ಯಕ್ರಮದ ದಿಶೆಯಲ್ಲಿ ಒಂದು ಉತ್ತಮ ಹೆಜ್ಜೆಯಾಗಿದೆ ಎಂದರು. ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇನ್ನಿತರರು ಹಾಜರಿದ್ದರು


from India & World News in Kannada | VK Polls https://ift.tt/3iL6LUg

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...