ಸಭಾಪತಿ ವಿರುದ್ಧ ಅವಿಶ್ವಾಸ: ರಾಜೀನಾಮೆ ನೀಡ್ತಾರಾ ಪ್ರತಾಪಚಂದ್ರ ಶೆಟ್ಟಿ?

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ ಡಿಸೆಂಬರ್ 15 ರಂದು ನಡೆದ ಕೋಲಾಹಲದ ಹಿನ್ನೆಲೆಯಲ್ಲಿ ಈ ಬಾರಿಯ ಅಧಿವೇಶನ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಪರಿಷತ್ ಸಭಾಪತಿ ಪ್ರತಾಪಚಂದ್ರ ವಿರುದ್ಧ ಬಿಜೆಪಿ ಅವಿಶ್ವಾಸ ನೋಟಿಸ್‌ ಮತ್ತೊಮ್ಮೆ ನೀಡಿದೆ. ಈ ಕಾರಣದಿಂದಾಗಿ ಸಭಾಪತಿ ಏನು ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ರಾಜೀನಾಮೆ ನೀಡುತ್ತಾರಾ ಸಭಾಪತಿ? ಸಭಾಪತಿಯ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಹಿನ್ನೆಲೆಯಲ್ಲಿ ಡಿಸೆಂಬರ್‌ 15 ರಂದು ವಿಧಾನಪರಿಷತ್‌ನಲ್ಲಿ ಕೋಲಾಹಲವೇ ನಡೆದಿತ್ತು. ಇದಾದ ಬಳಿಕ ಸದನದಲ್ಲಿ ನಡೆದ ಘಟನೆಯ ಬಗ್ಗೆ ವರದಿ ನೀಡಲು ಸದನ ಸಮಿತಿಯನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ರಚಿಸಿದ್ದರು. ಸದನ ಸಮಿತಿ ಮಧ್ಯಂತರ ವರದಿಯನ್ನು ನೀಡಿದೆ. ಇದೀಗ ಮತ್ತೆ ಬಿಜೆಪಿ ಸಭಾಪತಿ ವಿರುದ್ಧ ಅವಿಶ್ವಾಸ ನೋಟಿಸ್ ನೀಡಿದೆ. ಈ ನಡುವೆ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಆ ಸ್ಥಾನ ತೆರವಾಗಿದ್ದು ಉಪಸಭಾಪತಿ ಆಯ್ಕೆಯ ತಕ್ಷಣ ಸಭಾಪತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ? ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಪ್ರಯತ್ನ ಪಡುತ್ತಿದ್ದು ಪರಿಷತ್‌ನಲ್ಲಿ ಬಿಜೆಪಿಗೆ ಸಂಖ್ಯಾಬಲದ ಕೊರತೆ ಹಿನ್ನಲೆಯಲ್ಲಿ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆ ಹೆಚ್ಚಾಗಿದೆ. ಇದಕ್ಕೆ ಬದಲಾಗಿ ಉಪಸಭಾಪತಿ ಸ್ಥಾನ ಬಿಜೆಪಿಗೆ ದೊರಕಲಿದೆ. ಈ ನಡುವೆ ಪರಿಷತ್‌ ಸದಸ್ಯ ಬಸವರಾಜ ಬೊಮ್ಮಾಯಿ ಬುಧವಾರ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.


from India & World News in Kannada | VK Polls https://ift.tt/3a0abhW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...