ಮಾಲಿನ್ಯ ಮಂಡಳಿ ಸದಸ್ಯರ ನೇಮಕ ಪ್ರಶ್ನಿಸಿ ಅರ್ಜಿ; ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌..!

ಬೆಂಗಳೂರು: ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ.ಮರಿಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಸದಸ್ಯ ಸ್ಥಾನಕ್ಕೆ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಸೋಮವಾರ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿಯ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಪಿಐಎಲ್‌ ಕುರಿತು ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರತಿವಾದಿಗಳಾದ ಸರಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆ ಅಧೀನ ಕಾರ್ಯದರ್ಶಿ, ಕೆಎಸ್‌ಪಿಸಿಬಿ ಮುಖ್ಯಸ್ಥರು, ಸದಸ್ಯ ಕಾರ್ಯದರ್ಶಿ ಮತ್ತು ಸದಸ್ಯ ಜಿ.ಮರಿಸ್ವಾಮಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿತು. ಅರ್ಜಿದಾರರ ಪರ ವಕೀಲ ಪ್ರಿನ್ಸ್‌ ಐಸಕ್‌, ‘ಕೆಎಸ್‌ಪಿಎಸ್‌ಬಿ ಮುಖ್ಯಸ್ಥರು ಹಾಗೂ ಸದಸ್ಯರ ನೇಮಕಾತಿಗೆ ಸಂಬಂಧಪಟ್ಟಂತೆ ಸರಕಾರ ಮಾರ್ಗಸೂಚಿ ರೂಪಿಸಿತ್ತು. ಆದರೆ, ಸದಸ್ಯರ ಹಾಗೂ ಅಧ್ಯಕ್ಷರ ವಿದ್ಯಾರ್ಹತೆ ಕುರಿತ ಮಾರ್ಗಸೂಚಿ ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್‌, ಕೆಎಸ್‌ಪಿಸಿಬಿ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿ ಮತ್ತು ಸದಸ್ಯರ ನೇಮಕಕ್ಕೂ ಮುನ್ನ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು 2020ರ ಅ.8ರಂದು ಮಧ್ಯಂತರ ಆದೇಶ ನೀಡಿದೆ. ಆದರೆ ಆ ಆದೇಶವನ್ನು ಉಲ್ಲಂಘಿಸಿದೆ’ ಎಂದು ತಿಳಿಸಿದರು. ಅಲ್ಲದೆ, ಈ ಮಧ್ಯಂತರ ಆದೇಶ ತಿದ್ದುಪಡಿಗೆ ಕೋರಿ ಸರಕಾರ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಮರಿಸ್ವಾಮಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲು ಹೈಕೋರ್ಟ್‌ ಅನುಮತಿ ಪಡೆಯಬೇಕಿತ್ತು. ಆದರೆ, ಸರಕಾರ ಯಾವುದೇ ಅನುಮತಿ ಪಡೆಯದೆ ಮರಿಸ್ವಾಮಿಯನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ 2020ರ ಡಿ.30ರಂದು ಅಧಿಸೂಚನೆ ಹೊರಡಿಸಿದೆ ಎಂದರು. ಸರಕಾರದ ಕ್ರಮ ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ. ರಾಜಕೀಯ ನಿರ್ಧಾರ ತೆಗೆದುಕೊಂಡು ನೇಮಕ ಮಾಡಲಾಗಿದೆ. ಹೀಗಾಗಿ, ಮರಿಸ್ವಾಮಿ ನೇಮಕ ಕುರಿತು ಹೊರಡಿಸಿದ ಆಧಿದೇಶ ರದ್ದುಪಡಿಸಬೇಕು. ಸದಸ್ಯ ಸ್ಥಾನದಲ್ಲಿ ಕಾರ್ಯನಿರ್ವಹಿಸುವುದಕ್ಕೆ ಅವರಿಗೆ ನಿರ್ಬಂಧ ಹೇರಬೇಕು ಎಂದು ಅರ್ಜಿದಾರರು ಕೋರಿದ್ದಾರೆ.


from India & World News in Kannada | VK Polls https://ift.tt/2YgGjsd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...