ಕೊರೊನಾಗೆ ದೇಶೀಯ ಲಸಿಕೆ:ವೈರಾಣು ವಿರುದ್ಧ ಆತ್ಮನಿರ್ಭರ ಹೋರಾಟಕ್ಕೆ ಭಾರತ ಸಜ್ಜು!

ಮಾರಕ ಕೊರೊನಾ ವೈರಸ್ ವಿರುದ್ಧ ಹೆಚ್ಚೂ ಕಡಿಮೆ ಒಂದು ವರ್ಷದದಿಂದ ಹೋರಾಡುತ್ತಿರುವ ಭಾರತ, ಇದೀಗ ಈ ಯುದ್ಧದ ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಕೊನೆಗೂ ಭಾರತದಲ್ಲಿ ಮಾರಕ ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಾಗಿದೆ. ದೇಶದ ಮೊಟ್ಟ ಮೊದಲ ಕೊರೊನಾ ವೈರಸ್ ಲಸಿಕೆಗೆ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ. ಈ ಮೂಲಕ ಭಾರತೀಯರ ಬಹುದಿನಗಳ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಹೌದು, ಆಕ್ಸ್‌ಫರ್ಡ್‌-ಆಸ್ಟ್ರಾಜೆನಿಕಾ ಕೊರೊನಾ ಲಸಿಕೆ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್‌ ಲಸಿಕೆಗಳ ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ ಡಿಸಿಜಿಐ, ಎರಡೂ ಲಸಿಕೆಗಳನ್ನು ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಡಿಸಿಜಿಐ ಭಾರತದ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಅತ್ಯಂತ ಮಹತ್ವದ ಘಟ್ಟಕ್ಕೆ ಕೊಂಡೊಯ್ದು ನಿಲ್ಲಿಸಿದೆ. ಶೀಘ್ರದಲ್ಲೇ ಈ ಲಸಿಕೆ ಹಂಚಿಕೆ ಹಾಗೂ ವಿತರಣೆಗೆ ಮುಂದಡಿ ಇಡಲಾಗುವುದು ಎಂದು ಹೇಳಿರುವ ಡಿಸಿಜಿಐ, ಕೇಂದ್ರ ತಜ್ಞ ಸಮಿತಿ ಶಿಫಾರಸುಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಹಾಗಾದರೆ ಡಿಸಿಜಿಐನ ಇಂದಿನ(ಜ.03-ಭಾನುವಾರ) ಸುದ್ದಿಗೋಷ್ಠಿಯ ಬೆಳವಣಿಗೆಗಳತ್ತ ಗಮನಹರಿಸುವುದಾದರೆ..

ಕೊನೆಗೂ ಭಾರತದಲ್ಲಿ ಮಾರಕ ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಾಗಿದೆ. ದೇಶದ ಮೊಟ್ಟ ಮೊದಲ ಕೊರೊನಾ ವೈರಸ್ ಲಸಿಕೆಗೆ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ. ಈ ಮೂಲಕ ಭಾರತೀಯರ ಬಬಹುದಿನಗಳ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.


ಕೊರೊನಾಗೆ ದೇಶೀಯ ಲಸಿಕೆ:ವೈರಾಣು ವಿರುದ್ಧ ಆತ್ಮನಿರ್ಭರ ಹೋರಾಟಕ್ಕೆ ಭಾರತ ಸಜ್ಜು!

ಮಾರಕ ಕೊರೊನಾ ವೈರಸ್ ವಿರುದ್ಧ ಹೆಚ್ಚೂ ಕಡಿಮೆ ಒಂದು ವರ್ಷದದಿಂದ ಹೋರಾಡುತ್ತಿರುವ ಭಾರತ, ಇದೀಗ ಈ ಯುದ್ಧದ ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಕೊನೆಗೂ ಭಾರತದಲ್ಲಿ ಮಾರಕ ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಾಗಿದೆ. ದೇಶದ ಮೊಟ್ಟ ಮೊದಲ ಕೊರೊನಾ ವೈರಸ್ ಲಸಿಕೆಗೆ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ. ಈ ಮೂಲಕ ಭಾರತೀಯರ ಬಹುದಿನಗಳ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಹೌದು, ಆಕ್ಸ್‌ಫರ್ಡ್‌-ಆಸ್ಟ್ರಾಜೆನಿಕಾ ಕೊರೊನಾ ಲಸಿಕೆ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್‌ ಲಸಿಕೆಗಳ ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ ಡಿಸಿಜಿಐ, ಎರಡೂ ಲಸಿಕೆಗಳನ್ನು ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಡಿಸಿಜಿಐ ಭಾರತದ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಅತ್ಯಂತ ಮಹತ್ವದ ಘಟ್ಟಕ್ಕೆ ಕೊಂಡೊಯ್ದು ನಿಲ್ಲಿಸಿದೆ. ಶೀಘ್ರದಲ್ಲೇ ಈ ಲಸಿಕೆ ಹಂಚಿಕೆ ಹಾಗೂ ವಿತರಣೆಗೆ ಮುಂದಡಿ ಇಡಲಾಗುವುದು ಎಂದು ಹೇಳಿರುವ ಡಿಸಿಜಿಐ, ಕೇಂದ್ರ ತಜ್ಞ ಸಮಿತಿ ಶಿಫಾರಸುಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಹಾಗಾದರೆ ಡಿಸಿಜಿಐನ ಇಂದಿನ(ಜ.03-ಭಾನುವಾರ) ಸುದ್ದಿಗೋಷ್ಠಿಯ ಬೆಳವಣಿಗೆಗಳತ್ತ ಗಮನಹರಿಸುವುದಾದರೆ..



ಸುದ್ದಿಗೋಷ್ಠಿಯಲ್ಲಿ ಡಿಸಿಜಿಐ ಘೋಷಣೆ ಏನು?
ಸುದ್ದಿಗೋಷ್ಠಿಯಲ್ಲಿ ಡಿಸಿಜಿಐ ಘೋಷಣೆ ಏನು?

ಭಾರತದಲ್ಲಿ ಕೊರೊನಾ ಲಸಿಕೆಯ ಸಾರ್ವತ್ರಿಕ ಬಳಕೆಗೆ ಮುಂದಡಿ ಇಟ್ಟಿದ್ದ ಕೇಂದ್ರ ಸರ್ಕಾರ, ಇದಕ್ಕಾಗಿ ತಜ್ಞ ಸಮಿತಿಯೊಂದನ್ನು ರಚಿಸಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ಗೆ ವರದಿ ನೀಡಲು ಸೂಚಿಸಿತ್ತು.

ಅದರಂತೆ ಈ ಕೇಂದ್ರ ತಜ್ಷ ಸಮಿತಿ ಡಿಸಿಜಿಐಗೆ ವರದಿ ನೀಡಿದ್ದು, ಭಾರತದ ಸೀರಮ್ ಇನ್ಸ್ಟಿಟ್ಯೂಟ್, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಪ್ರಮುಖ ಔಷಧ ಕಂಪನಿ ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆ ಕೋವಿಶೀಲ್ಡ್‌, ಹಾಗೂ ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್‌ಗೆ ಅನುಮತಿ ನೀಡಿತ್ತು.

ಭಾರತಕ್ಕೆ ಸಿಕ್ತು ಲಸಿಕೆ ಬಲ: ದೇಶದ ಮೊಟ್ಟ ಮೊದಲ ಕೊರೊನಾ ಲಸಿಕೆಗೆ ಡಿಸಿಜಿಐ ಸಮ್ಮತಿ!

ಕೇಂದ್ರ ತಜ್ಞ ಸಮಿತಿ ವರದಿ ಆಧರಿಸಿ ಇಂದು(ಜ.02-ಶುಕ್ರವಾರ) ಸುದ್ದಿಗೋಷ್ಠಿ ನಡೆಸಿದ ಡಿಸಿಜಿಐ, ಈ ಎರಡೂ ಲಸಿಕೆಗಳ ತುರ್ತು ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿ ಆದೇಶ ಹೊರಡಿಸಿತು.



ಡಿಸಿಜಿಐ ನಿರ್ಧಾರಕ್ಕೆ ಪ್ರಧಾನಿ ಸಂತಸ!
ಡಿಸಿಜಿಐ ನಿರ್ಧಾರಕ್ಕೆ ಪ್ರಧಾನಿ ಸಂತಸ!

ಇನ್ನು ಭಾರತದಲ್ಲಿ ಎರಡು ಕೊರೊನಾ ಲಸಿಕೆಗಳ ತುರ್ತು ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ನಿರ್ಧಾರವನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶವಾಸಿಗಳು ಬಹಳ ದಿನಗಳಿಂದ ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದಾಗಿದೆ ಎಂದು ಹೇಳಿದ್ದಾರೆ. ಡಿಸಿಜಿಐ ಅನುಮತಿ ನೀಡಿರುವ ಕೊರೊನಾ ಲಸಿಕೆಗಳು ದೇಶೀಯ ನಿರ್ಮಿತವಾಗಿದ್ದು, ನಮ್ಮ ವೈದ್ಯ ವಿಜ್ಞಾನಿಗಳು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕಟಿಬದ್ಧರಾಗಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪ್ರಧಾನಿ ಮೋದಿ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

ಡಿಸಿಜಿಐ ನಿರ್ಧಾರ ಸ್ವಾಗತಿಸಿದ ಪ್ರಧಾನಿ: ಭಾರತೀಯರು ಹೆಮ್ಮೆಪಡುವ ಕ್ಷಣ ಎಂದ ಮೋದಿ!

ದೇಶದಿಂದ ಮಾರಕ ಕೊರೊನಾ ವೈರಸ್‌ನ್ನು ಒದ್ದೊಡಿಸುವ ಕ್ಷಣ ಹತ್ತಿರವಾಗಿದ್ದು, ಈ ವೇಳೆ ನಾನು ದೇಶದ ವೈದ್ಯಕೀಯ ಸಮುದಾಯ, ಪೊಲೀಸ್, ಕೊರೊನಾ ವಾರಿಯರ್ಸ್‌ಗಳಿಗೆ ತುಂಬು ಹೃದುಯದ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.



ಭಾರತವನ್ನು ಅಭಿನಂದಿಸಿದ ವಿಶ್ವ ಆರೋಗ್ಯ ಸಂಸ್ಥೆ!
ಭಾರತವನ್ನು ಅಭಿನಂದಿಸಿದ ವಿಶ್ವ ಆರೋಗ್ಯ ಸಂಸ್ಥೆ!

ಇನ್ನು ಭಾರತದಲ್ಲಿ ಎರಡು ಕೊರೊನಾ ವೈರಸ್ ಲಸಿಕೆಗಳ ತುರ್ತು ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ನಿರ್ಧಾರವನ್ನು ವಿಶ್ವ ಆರೋಗ್ಯ ಸಂಸ್ಥೆ(WHO) ಸ್ವಾಗತಿಸಿದೆ.ಈ ಕುರಿತು ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರದೇಶದ ಪ್ರಾದೇಶಿಕ ನಿರ್ದೇಶಕ ಡಾ.ಪೂನಂ ಖೇತ್ರಪಾಲ್ ಸಿಂಗ್, ಭಾರತದ ಈ ನಿರ್ಧಾರವನ್ನು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ.

ಕೊರೊನಾ ಲಸಿಕೆಗೆ ಸಮ್ಮತಿ: ಭಾರತದ ನಿರ್ಧಾರಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಅಭಿನಂದನೆ!

ಭಾರತದಂತಹ ವಿಶಾಲ ದೇಶದಲ್ಲಿ ಲಸಿಕೆ ಹಂಚಿಕೆ ಹಾಗೂ ವಿತರಣೆ ನಿಜಕ್ಕೂ ಒಂದು ದೊಡ್ಡ ಸವಾಲಾಗಿದ್ದು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಸವಾಲನ್ನು ಸ್ವೀಕರಿಸಲಿದೆ ಮತ್ತು ಇದರಲ್ಲಿ ಯಶಸ್ಸು ಕಾಣಲಿದೆ ಎಂದು ಡಾ.ಪೂನಂ ಖೇತ್ರಪಾಲ್ ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ.



ಲಸಿಕೆ ಸಾರ್ವತ್ರಿಕ ಬಳಕೆಗೆ ಸಮ್ಮತಿ ಸಿಕ್ಕಿದ್ದು ಹೇಗೆ?
ಲಸಿಕೆ ಸಾರ್ವತ್ರಿಕ ಬಳಕೆಗೆ ಸಮ್ಮತಿ ಸಿಕ್ಕಿದ್ದು ಹೇಗೆ?

ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಒಟ್ಟು 73,000 ಜನರ ಮೇಲೆ ತನ್ನ ಲಸಿಕೆ ಪ್ರಯೋಗವನ್ನು ಮಾಡಿತ್ತು ಈ ಲಸಿಕೆ ಶೇ. 70.42ರಷ್ಟು ಪರಿಣಾಮಕಾರಿತ್ವವನ್ನು ಸಾಬೀತುಪಡಿಸಿದೆ. ಭಾರತದಲ್ಲಿ 1,600 ಭಾಗವಹಿಸುವವರ ಮೇಲೆ ಸಂಸ್ಥೆಯು 2 ಮತ್ತು 3 ನೇ ಹಂತದ ಪ್ರಯೋಗಗಳನ್ನು ನಡೆಸುತ್ತಿದೆ. ಹೀಗಾಗಿ ಕೇಂದ್ರ ತಜ್ಞ ಸಮಿತಿ ಸಲ್ಲಿಸಿದ ವರದಿಯನ್ನು ಆಧರಿಸಿ ಕೋವಿಶೀಲ್ಡ್ ಲಸಿಕೆಯ ತುರ್ತು ಸಾರ್ವತ್ರಿಕ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ.

ಕೊರೊನಾ ಲಸಿಕೆ ತುರ್ತು ಸಾರ್ವತ್ರಿಕ ಬಳಕೆಗೆ ಡಿಸಿಜಿಐ ಅನುಮತಿ!

ಅದರಂತೆ ಎರಡು ಮತ್ತು ಮೂರನೇ ಹಂತದ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರೈಸಿರುವ ಹೈದರಾಬಾದ್ ಮೂಲಕದ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್‌ನ ಪರಿಣಾಮಕಾರಿತ್ವ ಕೂಡ ಧನಾತ್ಮಕವಾಗಿದೆ ಎಂದು ಡಿಸಿಜಿಐ ಸ್ಪಷ್ಟಪಡಿಸಿದೆ. ಹೀಗಾಗಿ ಕೇಂದ್ರ ತಜ್ಞ ಸಮಿತಿ ಸಲ್ಲಿಸಿದ ವರದಿಯನ್ನು ಆಧರಿಸಿ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಸಾರ್ವತ್ರಿಕ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ.





from India & World News in Kannada | VK Polls https://vijaykarnataka.com/news/india/indias-wait-over-as-dcgi-approves-two-coronavirus-vaccine-for-emergency-use/articleshow/80081444.cms

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...