ಉಜಿರೆಯಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಕೂಗಿದ್ದು ಬಿಜೆಪಿ ಕಾರ್ಯಕರ್ತ?; ದಾಖಲಾಯ್ತು ಪರ-ವಿರೋಧ ದೂರು..!

ಬೆಳ್ತಂಗಡಿ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್‌ ಚುನಾವಣಾ ಫಲಿತಾಂಶ ವೇಳೆ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ವಿಜಯೋತ್ಸವ ವೇಳೆ ಕಾರ್ಯಕರ್ತರು ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಪಾಕ್‌ ಪರ ಘೋಷಣೆ ಕೂಗಿದ್ದು ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಬಿಜೆಪಿ ಕಾರ್ಯಕರ್ತನಾಗಿರುವ ಸ್ಥಳೀಯ ನಿವಾಸಿ ಪವನ್‌ ಧರ್ಮಸ್ಥಳ ಎಂಬಾತ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾನೆ ಎಂದು ಹೇಳಲಾಗ್ತಿದ್ದು, ಈ ಬಗ್ಗೆ ವಿಡಿಯೋ ಮತ್ತು ಫೋಟೋ ಹಾಕಿ ಈತನೇ ಪಾಕ್‌ ಪರ ಘೋಷಣೆ ಕೂಗಿದ್ದು ಎಂದು ಅನೇಕರು ಪೋಸ್ಟ್‌ ಹಾಕಿದ್ದಾರೆ. ಈ ಸಂಬಂಧ ಎಸ್‌ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ನನ್ನ ಮಾನಹಾನಿಗೆ ಪ್ರಯತ್ನಿಸಲಾಗಿದೆ’ ಬಿಜೆಪಿ ಕಾರ್ಯಕರ್ತ ಪಾಕ್‌ ಪರ ಘೋಷಣೆ ಕೂಗಿದ್ದಾನೆ ಎಂಬ ಸುದ್ದಿ ಪ್ರಚಾರ ಆಗ್ತಿದ್ದಂತೆ, ಫೋಟೋ ಸಹಿತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಖುವ ಮೂಲಕ ತನ್ನ ಮಾನಹಾನಿಗೆ ಯತ್ನಿಸಲಾಗಿದೆ ಎಂದು ಪವನ್‌ ಧರ್ಮಸ್ಥಳ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ಲದೇ ತಾನು ಮಾಡಿರುವ ವಿಡಿಯೋವೊಂದರಲ್ಲಿ ನಾನು ಇಲ್ಲಿಯತನಕ ಪಾಕ್‌ ಪರ ಘೋಷಣೆ ಕೂಗಿಲ್ಲ, ಮುಂದೆಯೂ ಕೂಗುವುದಿಲ್ಲ. ನನ್ನ ಬಗ್ಗೆ ಎಸ್‌ಡಿಪಿಐ ಕಾರ್ಯಕರ್ತರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾನೆ. ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರೇ ಪಾಕ್‌ ಪರ ಘೋಷಣೆ ಕೂಗಿದ್ದಾರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದೂರಿನ ಮೇಲೆ ತನಿಖೆ ಕೈಗೆತ್ತಿಕೊಂಡಿದ್ದಾರೆ. ಏನಿದು ಪ್ರಕರಣ?ಡಿಸೆಂಬರ್‌ 30ರಂದು ನಡೆದ ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ವೇಳೆ ಉಜಿರೆಯ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಒಂದೇ ಕಡೆ ಜಮಾಯಿಸಿದ್ದಾರೆ. ಈ ವೇಳೆ ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಕಾಣುತ್ತಿದ್ದಂತೆ ವಿವಿಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿಕೊಳ್ಳುತ್ತಿದ್ದರು. ಈ ವೇಳೆ ಗುಂಪಿನಿಂದ ಕೇಳಿಬಂದಿತ್ತು. ಬಿಜೆಪಿ ಕಾರ್ಯಕರ್ತರು ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಅಕ್ಕಪಕ್ಕದಲ್ಲೇ ವಿಜಯೋತ್ಸವ ಆಚರಿಸಿಕೊಳ್ಳುತ್ತಿದ್ದರಿಂದ ಯಾವ ಪಕ್ಷದ ಕಾರ್ಯಕರ್ತರು ಈ ಘೋಷಣೆ ಕೂಗಿದ್ದು ಎಂದು ಸ್ಪಷ್ಟವಾಗಿ ನಿರ್ಧಾರ ಮಾಡಲು ಆಗುತ್ತಿರಲಿಲ್ಲ. ರಾಜ್ಯಾದ್ಯಂತ ಸುದ್ದಿಯಾದ ಈ ಪ್ರಕರಣದಲ್ಲಿ ಆರು ಮಂದಿ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ಮಂದಿ ಬಿಜೆಪಿ ನಾಯಕರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಇತ್ತ ಎಸ್‌ಡಿಪಿಐ ಮುಖಂಡರು ಕೂಡ, ತಮ್ಮ ಪಕ್ಷದ ಕಾರ್ಯಕರ್ತರು ಪಾಕ್‌ ಪರ ಘೋಷಣೆ ಕೂಗಿಲ್ಲ. ಒಂದು ವೇಳೆ ಕೂಗಿದ್ದೇ ಆದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಅಲ್ಲದೇ ಈ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿರುವವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದರು.


from India & World News in Kannada | VK Polls https://ift.tt/3nb9maH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...