ಅಯೋಧ್ಯೆ ಮಸೀದಿ ನಿರ್ಮಾಣಕ್ಕೆ ವಿಘ್ನ? 5 ಎಕರೆ ಜಾಗ ತಮ್ಮದೆಂದು ಹೈಕೋರ್ಟ್‌ ಮೆಟ್ಟಿಲೇರಿದ ಸೋದರಿಯರು!

ಲಖನೌ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ನೀಡಿರುವ ನಿವೇಶನದ ತಮ್ಮದೆಂದು ಹಕ್ಕು ಮಂಡಿಸಿ ದಿಲ್ಲಿ ಮೂಲದ ಇಬ್ಬರು ಸಹೋದರಿಯರು ಮೆಟ್ಟಿಲೇರಿದ್ದಾರೆ. ರಾಣಿ ಕಪೂರ್‌ ಅಲಿಯಾಸ್‌ ರಾಣಿ ಬಲೂಜಾ, ರಮಾರಾಣಿ ಪಂಜಾಬಿ ಎಂಬುವವರು ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠಕ್ಕೆ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಫೆ.8ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ. ''ನಮ್ಮ ತಂದೆ ಜ್ಞಾನಚಂದ್ರ ಪಂಜಾಬಿ ಅವರು ದೇಶ ವಿಭಜನೆ ಸಂದರ್ಭದಲ್ಲಿ, 1947ರಲ್ಲಿ ಭಾರತಕ್ಕೆ ಬಂದು, ಅಯೋಧ್ಯೆಯಲ್ಲಿ(ಆಗಿನ ಫೈಜಾಬಾದ್‌) ನೆಲೆಸಿದ್ದರು. ಧನ್ನಿಪುರ ಗ್ರಾಮದಲ್ಲಿ ತಂದೆಗೆ ನಜುಲ್‌ ಇಲಾಖೆಯು 28 ಎಕರೆ ಜಮೀನನ್ನು ನೀಡಿತ್ತು. 5 ವರ್ಷಗಳ ಅವಧಿಗೆ ನೀಡಿದ್ದ ಜಮೀನಿನ ಮಾಲೀಕತ್ವ ನಂತರವೂ ಮುಂದುವರಿಯಿತು. ಬಳಿಕ ಕಂದಾಯ ಇಲಾಖೆಯಲ್ಲಿರುವ ಜಮೀನಿಗೆ ಸಂಬಂಧಿಸಿದ ದಾಖಲೆಗಳಲ್ಲಿ ತಂದೆ ಹೆಸರನ್ನು ಸೇರಿಸಲಾಗಿತ್ತು,'' ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ. ನಂತರದ ದಿನಗಳಲ್ಲಿ ತಂದೆಯ ಹೆಸರನ್ನು ದಾಖಲೆಗಳಿಂದ ತೆಗೆದು ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ತಂದೆಯವರು ಅಯೋಧ್ಯೆಯಲ್ಲಿನ ನಜುಲ್‌ ಇಲಾಖೆಯ ಹೆಚ್ಚುವರಿ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪುರಸ್ಕರಿಸಲಾಗಿತ್ತು. ವಿಚಾರಣೆ ಬಳಿಕ ಅಧಿಕಾರಿಗಳು ಪುನಃ ತಂದೆಯವರ ಹೆಸರನ್ನು ದಾಖಲೆಗಳಿಂದ ತೆಗೆದು ಹಾಕಿದರು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ. ಇದನ್ನು ಪರಿಗಣಿಸದೇ, 28 ಎಕರೆ ಪೈಕಿ 5 ಎಕರೆಯನ್ನು ಸುನ್ನಿ ವಕ್ಫ್ ಮಂಡಳಿಗೆ ಹಂಚಿಕೆ ಮಾಡಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್‌ ವಕ್ಫ್ ಮಂಡಳಿಗೆ ಐದು ಎಕರೆ ಜಾಗವನ್ನು 2019ರ ನ.7ರಂದು ನೀಡಲಾಗಿದೆ. ಈ ನಿವೇಶನದಲ್ಲಿಮಸೀದಿ ನಿರ್ಮಾಣಕ್ಕೆ ಜ. 26ರಂದು ಶಿಲಾನ್ಯಾಸ ನೆರವೇರಿಸಲಾಗಿದೆ.


from India & World News in Kannada | VK Polls https://ift.tt/39MTuIa

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...