ಗದಗ: ಒಂದೂವರೆ ವರ್ಷದ ಮಗುವನ್ನು ಕೊಂದು ಸುಟ್ಟು ಹಾಕಿದ್ದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ!

ಗದಗ: ಒಂದೂವರೆ ವರ್ಷದ ಹೆತ್ತ ಮಗುವನ್ನು ಕೊಂದ ತಂದೆಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶ ರಾಜಶೇಖರ ಪಾಟೀಲ ಅವರು ಈ ತೀರ್ಪು ನೀಡಿದ್ದಾರೆ. 2015 ಏ. 6ರಂದು ಗಜೇಂದ್ರಗಡ ಗುಡ್ಡದಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ ಪಾಟೀಲಗೆ ಮರಣದಂಡನೆ ಹಾಗೂ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಘಟನೆ ಹಿನ್ನೆಲೆ : ರೋಣ ತಾಲೂಕು ಹುಲ್ಲೂರು ಗ್ರಾಮದ ಪ್ರಶಾಂತ ಪಾಟೀಲ, ಮಹಿಳೆಯೊಬ್ಬಳ ಜತೆ ಪ್ರೀತಿಸುವ ನಾಟಕವಾಡಿ ಮೋಸ ಮಾಡಿದ್ದ. ಇಬ್ಬರ ಪ್ರೀತಿಗೆ ಸಾಕ್ಷಿಯಾಗಿತ್ತು. ಪ್ರಶಾಂತನಿಂದ ಮೋಸಹೋಗಿದ್ದ ಮಹಿಳೆ ಜೀವನಾಂಶ ಕೋರಿ ಕೋರ್ಟ್‌ ಮೊರೆ ಹೋಗಿದ್ದಳು. ಇದರಿಂದ ಕುಪಿತಗೊಂಡಿದ್ದ ಪ್ರಶಾಂತ ತನ್ನ ಒಂದೂವರೆ ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಗಜೇಂದ್ರಗಡದ ಕಾಲಕಾಲೇಶ್ವರ ಗುಡ್ಡದಲ್ಲಿ ಕೊಲೆ ಮಾಡಿ ಸುಟ್ಟು ಹಾಕಿದ್ದ. ಈ ಕುರಿತು ಮಗುವಿನ ತಾಯಿ ದೂರು ದಾಖಲಿಸಿದ್ದಳು. ವಿಚಾರಣೆ ವೇಳೆ ಪ್ರಶಾಂತ ಪಾಟೀಲ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿಕೋರ್ಟ್‌ ಅಂತಿಮ ತೀರ್ಪು ನೀಡಿದೆ.


from India & World News in Kannada | VK Polls https://ift.tt/3s9IeMf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...