ಕೋವಿಡ್‌ ಎರಡನೇ ಅಲೆ ಆತಂಕ: ಮಹಾರಾಷ್ಟ್ರ, ಕೇರಳ ಗಡಿಭಾಗದಲ್ಲಿ ಬಿಗಿ ಕ್ರಮ, ಸುಧಾಕರ್‌ ಸೂಚನೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಹಾಗೂ ರೂಪಾಂತರ ಸೋಂಕು ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ಕೇರಳ ಗಡಿಭಾಗದಲ್ಲಿ ಬಿಗಿ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದರು. ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಹತ್ತು ಜಿಲ್ಲೆಗಳಲ್ಲಿ ಹೆಚ್ಚು ನಿಗಾ ವಹಿಸಬೇಕಾಗಿದೆ. ಆರ್ ಟಿಪಿಸಿಆರ್ ನೆಗೆಟಿವ್‌ ರಿಪೋರ್ಟ್ ಇಲ್ಲದ ಯಾವುದೇ ಜನರನ್ನು ಮಹಾರಾಷ್ಟ್ರ ಮತ್ತು ಕೇರಳದಿಂದ ಕರ್ನಾಟಕಕ್ಕೆ ಕಡ್ಡಾಯವಾಗಿ ಪ್ರವೇಶ ನೀಡದಂತೆ ತಾಂತ್ರಿಕ ಸಲಹಾ ಸಮಿತಿಯು ಸಲಹೆ ಮಾಡಿದೆ. ಈ ಸಂಬಂಧ ಗೃಹ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಸದ್ಯಕ್ಕೆ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣದಲ್ಲಿ ಇದ್ದು ಕರ್ಫ್ಯೂ ಅಥವಾ ಲಾಕ್‌ಡೌನ್ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು. ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರತಿಯೊಬ್ಬರ ತಪಾಸಣೆ ವರದಿ ಪಡೆದುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೂ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಕೋವಿಡ್ ಲಸಿಕೆ ತೆಗೆದುಕೊಳ್ಳಲು ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಸ್ ಗಳು ಹಿಂಜರಿಯುತ್ತಿದ್ದಾರೆ. ಶೇ.50ರಷ್ಟು ಮಂದಿ ಮಾತ್ರ ಲಸಿಕೆ ತೆಗೆದುಕೊಂಡಿದ್ದಾರೆ.ಇದುವರೆಗೆ ಫ್ರಂಟ್‌ ಲೈನ್ ವಾರಿಯರ್ಸ್ ಗಳು ಹಿರಿಯ ಅಧಿಕಾರಿಗಳು ಲಸಿಕೆ ತೆಗೆದುಕೊಂಡು ಮಾದರಿಯಾಗಿದ್ದಾರೆ. ಹಾಗಾಗಿ ಯಾವುದೋ ವದಂತಿಗಳನ್ನು ನಂಬಿ ನೀವು ಬಲಿಪಶುಗಳಾಗಬೇಡಿ.ನೀವೇ ಲಸಿಕೆ ತೆಗೆದುಕೊಳ್ಳದೇ ಇದ್ದರೆ ಜನಸಾಮಾನ್ಯರ ಪಾಡೇನು ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಸಚಿವರು ಮನವಿ ಮಾಡಿಕೊಂಡರು. ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿಲ್ಲ, ಶುಕ್ರವಾರ 386 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 209 ಪ್ರಕರಣಗಳು ಬೆಂಗಳೂರಿನಲ್ಲೇ ಕಂಡುಬಂದಿದೆ. ಶುಕ್ರವಾರ ಕೋವಿಡ್‌ನಿಂದ 5 ಸಾವು ಆಗಿದೆ.ರಾಜ್ಯದಲ್ಲಿ ಸಾವಿನ ಪ್ರಮಾಣ 1.3 ಇದೆ ಎಂದು ತಿಳಿಸಿದರು. ಬ್ರಿಟನ್‌ನಿಂದ ಬಂದ ಪ್ರಯಾಣಿಕರ ತಪಾಸಣೆ ಮಾಡಿ ಕೋವಿಡ್ ಬ್ರಿಟನ್ ರೂಪಾಂತರ ಹರಡದಂತೆ ತಡೆಗಟ್ಟಲಾಗಿದೆ. ಬ್ರಿಜಿಲ್, ಸೌತ್ ಆಫ್ರಿಕಾ ರೂಪಾಂತರ ಕೋವಿಡ್‌ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಲಾಗಿದೆ ಎಂದರು. ಇಂಡೋರ್ ಪ್ರದೇಶದಲ್ಲಿ ಹೆಚ್ಚು ಜನರು ಸೇರುವುದು ಸರಿಯಲ್ಲ, ಸಾಮಾಜಿಕ ಅಂತರ ಕಾಪಾಡುವುದು ಅಗತ್ಯ, ಮಾಸ್ಕ್ ಧರಿಸುವುದು ಹಾಗೂ ಎಗ್ಗಿಲ್ಲದೆ ಸಾವಿರಾರು ಜನರು ಸೇರುವುದಕ್ಕೆ ಕಡಿವಾಣ ಅಗತ್ಯವಿದೆ. ರಾಜಕೀಯ ವ್ಯವಸ್ಥೆಯಲ್ಲಿ ಸಮಾರಂಭನಡೆಯುತ್ತಿದೆ ಆದರೆ ಎಲ್ಲರೂ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಸೂಚಿಸಿದರು. ಮಾರ್ಚ್‌ ಅಂತ್ಯದ ವರೆಗೂ ಎಚ್ಚರ ಅಗತ್ಯ ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಮಾರ್ಚ್ ಅಂತ್ಯದವರೆಗೂ ಹೆಚ್ಚಿನ ಎಚ್ಚರಿಕೆ ಅಗತ್ಯವಿದೆ. ಮಾರ್ಚ್‌ ಅಂತ್ಯದವರೆಗೆ ಗಂಭೀರವಾಗಿ ತೆಗೆದುಕೊಳ್ಳಬೇಕು. ಲಸಿಕೆ ಪಡೆಯಲು ಅವಕಾಶ ಇದ್ದವರು ಅದನ್ನು ಪಡೆಯಬೇಕು ಎಂದು ಮನವಿ ಮಾಡಿದರು.


from India & World News in Kannada | VK Polls https://ift.tt/2OQqXct

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...