ದಕ್ಷಿಣ ಕನ್ನಡ-ಕಾಸರಗೋಡು ಜಿಲ್ಲೆ ನಡುವೆ ಸಂಚಾರ ನಿರ್ಬಂಧ: ಕೇಂದ್ರ, ರಾಜ್ಯಕ್ಕೆ ಹೈ ಕೋರ್ಟ್‌ ನೋಟಿಸ್‌

ಬೆಂಗಳೂರು/ಮಂಗಳೂರು: ಕೇರಳದ ಜಿಲ್ಲೆಯಿಂದ ಕರ್ನಾಟಕದ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಕಾಸರಗೋಡಿನ ವಕೀಲ ಬಿ.ಸುಬ್ಬಯ್ಯ ರೈ ಸಲ್ಲಿಸಿರುವ ಅರ್ಜಿಯು ಮುಖ್ಯ ನ್ಯಾ. ಎ.ಎಸ್‌.ಓಕ್‌ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿ ಕುರಿತು ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಕೋವಿಡ್‌-19 ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್‌ಡೌನ್‌ ಅನ್ನು ಕೇಂದ್ರ ಸರಕಾರ ಹಂತ ಹಂತವಾಗಿ ತೆರವು ಮಾಡಿದೆ. 2021ರ ಜ. 27ರಂದು ಅನ್‌ಲಾಕ್‌ 4.0 ಮಾರ್ಗ ಸೂಚಿಗಳನ್ನು ಹೊರಡಿಸಿದೆ. ಅದರಲ್ಲಿ ಜನರ ಮತ್ತು ಪ್ರಯಾಣಿಕರ ಅಂತರ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ, ಫೆ.18ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯು ಕೇರಳದ ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಕೇಂದ್ರ ಸರಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.


from India & World News in Kannada | VK Polls https://ift.tt/3pYpcHm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...