ಬೆಂಗಳೂರು: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ನಗರದಲ್ಲಿ ಪಾಲಿಕೆ ಮತ್ತು ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿವೆ. ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಪಾಲಿಕೆ ಸಿಬ್ಬಂದಿಗಳು 24/7 ಕಾರ್ಯನಿರ್ವಹಿಸುತ್ತಿದ್ದಾರೆ. ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಕರ್ನಾಟಕದಲ್ಲೂ ಇದರ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ. ಮತ್ತೊಂದು ಕಡೆಯಲ್ಲಿ ಲಸಿಕೆ ಅಭಿಯಾನಕ್ಕೂ ಚುರುಕು ನೀಡಲಾಗುತ್ತಿದೆ. ಹೊರ ರಾಜ್ಯದಿಂದ ಬರುವ ವಾಹನಗಳ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ. ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು ಕೇರಳ, ತಮಿಳುನಾಡು ಸೇರಿ ವಿವಿಧ ರಾಜ್ಯಗಳಿಂದ ಬರುವ ಬಸ್ ಗಳ ತಪಾಸಣೆ ನಡೆಸಲಾಗುತ್ತಿದೆ. ನಗರದಲ್ಲಿ ಸಂಬಂಧಿಸಿದ ಇಲಾಖೆಗಳು ಹೈ ಅಲರ್ಟ್ ಆಗಿವೆ. ಪ್ರತಿಯೊಂದು ಬಸ್ ಗಳನ್ನು ಚೆಕ್ ಮಾಡಿ ಕೋವಿಡ್ ನೆಗೆಟಿವ್ ರಿಪೋರ್ಟ್ ಪರಿಶೀಲನೆ ನಡೆಸಲಾಗುತ್ತಿದೆ. ನಗರಕ್ಕೆ ಆಗಮಿಸಿದ ಪ್ರತಿಯೊಬ್ಬ ಪ್ರಯಾಣಿಕನ ರಿಪೋರ್ಟ್ ಟೆಸ್ಟ್ ಮಾಡಲಾಗುತ್ತಿದ್ದು, ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರೆ ಮಾತ್ರ ರಾಜ್ಯಕ್ಕೆ ಎಂಟ್ರಿ ನೀಡಲಾಗುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್, ಹೊಸೂರು ರಸ್ತೆ ಪ್ರಮುಖ ಗಡಿ ಪ್ರದೇಶಗಳಲ್ಲಿ ಸಿಬ್ಬಂದಿಗಳು ಪ್ರಯಾಣಿಕರನ್ನು ಚೆಕ್ಕಿಂಗ್ ಮಾಡುತ್ತಿದ್ದು, RTPCR ರಿಪೋರ್ಟ್ ಇದ್ರೆ ಮಾತ್ರ ರಾಜ್ಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೋವಿಡ್ ಸೋಂಕಿಂದ - 12,287 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಒಟ್ಟು ಕೋವಿಡ್ ಪ್ರಕರಣಗಳ ಖಚಿತ ಸಂಖ್ಯೆ 947246 ರಷ್ಟಿದೆ. 125 ಮಂದಿ ಕೋವಿಡ್ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
from India & World News in Kannada | VK Polls https://ift.tt/3aEoiLD