ಉಡುಪಿ: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾನುವಾರ ಮಧ್ಯಾಹ್ನ ವೇಳೆ ದಿಢೀರ್ ಆಗಿ ಅಕಾಲಿಕ ಮಳೆಯಾಗಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಆರಂಭಗೊಂಡ ವರುಣನ ಅಬ್ಬರ ಒಂದು ಗಂಟೆಗೂ ಅಧಿಕ ಕಾಲ ಎಡೆಬಿಡದೆ ಸುರಿದಿದೆ. ಉಡುಪಿ ನಗರ, ಮಣಿಪಾಲ, ಬ್ರಹ್ಮಾವರ, ಕುಂದಾಪುರ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ವಿವಿಧೆಡೆ ಅಕಾಲಿಕ ಮಳೆಯಾಗಿರುವ ವರದಿಯಾಗಿದೆ. ಅಕಾಲಿಕ ಮಳೆಗೆ ಸಿಲುಕಿದ ದ್ವಿಚಕ್ರ ವಾಹನ ಸವಾರರು ಹಾಗೂ ಸಾರ್ವಜನಿಕರು ಮನೆಗೆ ತೆರಳಲು ಪರದಾಡುವಂತಾಯಿತು. ಭಾನುವಾರ ರಜಾ ದಿನ ಹಾಗೂ ವಿವಿಧ ಶುಭ ಸಮಾರಂಭಗಳಿದ್ದು, ಮಧ್ಯಾಹ್ನದ ಅಕಾಲಿಕ ಮಳೆಯಿಂದಾಗಿ ಕೆಲವೆಡೆ ಸಮಸ್ಯೆಯಾಗಿದೆ. ಸಾರ್ವಜನಿಕರು ಮಳೆಯಲ್ಲಿ ನೆನೆದುಕೊಂಡು ಹೋಗುತ್ತಿರುವ ದೃಶ್ಯ ನಗರದ ಅಲ್ಲಲ್ಲಿ ಕಂಡುಬಂತು. ಉಡುಪಿಯಲ್ಲಿ ದಿಢೀರ್ ಆಗಿ ಮಳೆಯಾಗಿದೆ. ಬೆಳಿಗ್ಗಿನಿಂದ ಬಿಸಿಲಿನಿಂದ ಕೂಡಿದ್ದ ವಾತಾವರಣ ಮಧ್ಯಾಹ್ನ ಆಗುತ್ತಿದ್ದಂತೆ ಮೋಡದಿಂದ ಮುಸುಕಿದೆ. ಉಡುಪಿ ನಗರ ಸಹಿತ ಮಣಿಪಾಲ, ಬ್ರಹ್ಮಾವರ, ಕುಂದಾಪುರ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ಹಲವೆಡೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
from India & World News in Kannada | VK Polls https://ift.tt/3siAOGH