ನಿಗಮ ಮಂಡಳಿ ಸ್ಥಾಪನೆ ವಿಚಾರವಾಗಿ ಹೈಕೋರ್ಟ್‌ಗೆ ಮಾಹಿತಿ ನೀಡಿದ ಅಡ್ವೊಕೇಟ್‌ ಜನರಲ್‌

ಬೆಂಗಳೂರು: ಅವಕಾಶ ವಂಚಿತ ಹಾಗೂ ಹಿಂದುಳಿದ ಸಮುದಾಯಗಳ ಏಳಿಗೆಗೆ ನಿಗಮ ಮಂಡಳಿ ಸ್ಥಾಪಿಸುವುದು ಸರಕಾರದ ಪ್ರಮುಖ ನೀತಿ ನಿರ್ಣಯವಾಗಿದ್ದು, 2007ರಿಂದ ಈವರೆಗೆ ಎಲ್ಲ ಸರಕಾರಗಳು ಹಲವು ನಿಗಮ ಮಂಡಳಿಗಳನ್ನು ಸ್ಥಾಪಿಸಿವೆ ಎಂದು ಅಡ್ವೊಕೇಟ್‌ ಜನರಲ್‌ ಹೈಕೋರ್ಟ್‌ಗೆ ಸೋಮವಾರ ಹೇಳಿದ್ದಾರೆ. ನಿಗಮ-ಮಂಡಳಿ ಸ್ಥಾಪನೆ ಪ್ರಶ್ನಿಸಿ ವಕೀಲ ಎಸ್‌.ಬಸವರಾಜು ಹಾಗೂ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರತ್ಯೇಕ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ನೇತೃತ್ವದ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ಪೀಠ, ಜ.22ರಂದು ಕಡೆಯ ಅವಕಾಶ ನೀಡಿದ್ದರೂ ಸರಕಾರ ಈವರೆಗೆ ಆಕ್ಷೇಪಣೆ ಸಲ್ಲಿಸಿಲ್ಲ. ಮಾ.17ರೊಳಗೆ ಸಲ್ಲಿಸಲೇಬೇಕು ಎಂದು ಹೇಳಿತು. ಯಾವ ಶಾಸನಾತ್ಮಕ ಬಳಸಿ ರಚಿಸಲಾಗಿದೆ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು. ಅಲ್ಲಿಯವರೆಗೆ ನಿಗಮ-ಮಂಡಳಿಗಳ ರಚನೆ ಹೈಕೋರ್ಟ್‌ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಡಿ.14ರಂದು ನೀಡಿದ್ದ ಮಧ್ಯಂತರ ಆದೇಶವನ್ನು ಪೀಠ ಮುಂದುವರಿಸಿತು. ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ಈ ಹಿಂದಿನಿಂದ ಸ್ಥಾಪನೆ ಮಾಡಿರುವುದು, ಯಾರೊಬ್ಬರ ಆಕ್ಷೇಪ ಇಲ್ಲ. ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ರಚನೆ ಮುಂದಿಟ್ಟುಕೊಂಡು ಹಲವರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಮಂಡಳಿಗಳ ಸ್ಥಾಪನೆಯಿಂದ ಸಮುದಾಯಗಳಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ ಎಂದು ತಿಳಿಸಿದರು. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮಕುಮಾರ್‌, ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಗಮನದಲ್ಲಿಟ್ಟುಕೊಂಡು ಆಯಾ ಸಮುದಾಯಗಳ ಮತಗಳನ್ನು ಸೆಳೆಯಲು ನಿಗಮ ಮಂಡಳಿಗಳನ್ನು ರಚಿಸಲಾಗಿದೆ. ಸರಕಾರ ಈವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಿಲ್ಲ ಎಂದು ದೂರಿದರು.


from India & World News in Kannada | VK Polls https://ift.tt/3umFihh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...