ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಿ.ಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇನ್ನು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತ ತಲೆ ಮರೆಸಿಕೊಂಡಿರುವ ಮಧ್ಯೆಯೇ ಇದೀಗ ಮತ್ತೊಂದು ರಿಲೀಸ್ ಮಾಡಿದ್ದಾಳೆ. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ. ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಎಂದು ಸಿಡಿ ಯುವತಿ ನಮ್ಮ ತಂದೆ, ತಾಯಿಗೆ ಸುರಕ್ಷತೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾಳೆ. ಪೊಲೀಸ್ ಕಮಿಷನರ್ ವಿರುದ್ಧ ಗಂಭೀರ ಆರೋಪ! ಇನ್ನು ಇದೆ ವೇಳೆ ಸಿ.ಡಿ ಲೇಡಿ ನಗರ ಪೊಲೀಸ್ ಆಯುಕ್ತರ ವಿರುದ್ಧ ಗಂಭೀರ ಆರೋಪಗಳನ್ನು ವಿಡಿಯೋ ಮೂಲಕ ಮಾಡಿದ್ದಾರೆ. ಮಾರ್ಚ್ 12ರಂದೇ ನಗರ ಪೊಲೀಸ್ ಆಯುಕ್ತರಿಗೆ, ವಿಶೇಷ ತನಿಖಾ ತಂಡಕ್ಕೆ ಮೊದಲ ವಿಡಿಯೋವನ್ನು ಕಳಿಸಿದ್ದೆ. ಆದರೆ ನಾನು ವಿಡಿಯೋ ಕಳಿಸಿದ್ದ ದಿನ ಬಿಡುಗಡೆ ಆಗಿಲ್ಲ. ಮಾ.13ರಂದು ರಮೇಶ್ ಜಾರಕಿಹೊಳಿಯವರು ದೂರು ನೀಡಿದ ಬಳಿಕ ವಿಡಿಯೋ ರಿಲೀಸ್ ಆಗಿದೆ. ದೂರು ನೀಡಿದ ಅರ್ಧ ಗಂಟೆ ಬಳಿಕ ವಿಡಿಯೋ ರಿಲೀಸ್ ಆಗಿದೆ. ಹೀಗಾಗಿ ಇಲ್ಲಿ ಏನಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಎಸ್ಐಟಿ ಯಾರ ಪರವಾಗಿದ್ದಾರೆಂದು ಅರ್ಥವಾಗುತ್ತಿಲ್ಲ. ನಮ್ಮ ತಂದೆ, ತಾಯಿ ಸ್ವಇಚ್ಛೆಯಿಂದ ದೂರು ನೀಡಿರಲ್ಲ. ನಾನು ತಪ್ಪೇ ಮಾಡಿಲ್ಲ ಎಂದು ನಮ್ಮ ಪೋಷಕರಿಗೆ ಗೊತ್ತು. ಹೀಗಾಗಿ ಅವರು ದೂರು ನೀಡಿರುವುದಕ್ಕೆ ಸಾಧ್ಯವಿಲ್ಲ. ನನಗೆ ಯಾವತ್ತಿದ್ರೂ ನ್ಯಾಯ ಸಿಗುತ್ತೆ ಎಂಬ ವಿಶ್ವಾಸವಿದೆ ಎಂದು ವಿಡಿಯೋದಲ್ಲಿ ವಿವರಿಸಿದ್ದಾರೆ. ನಮ್ಮ ತಂದೆ, ತಾಯಿಗೆ ರಕ್ಷಣೆ ನೀಡಿ. ಅವರು ಸೇಫ್ ಎಂದು ತಿಳಿದ ತಕ್ಷಣ ಎಸ್ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್ ಕುಮಾರ್ ಹಾಗೂ ಮಹಿಳಾ ಸಂಘಟನೆಗಳ ಬಳಿ ಕೇಳಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನು ಘಟನೆ ಬಳಿಕ ಯುವತಿ ತಲೆಮರೆಸಿಕೊಂಡಿದ್ದಾಳೆ. ಎಸ್ಐಟಿ ಕೂಡ ಯುವತಿಗೆ ನಾಲ್ಕು ಬಾರಿ ನೋಟಿಸ್ ನೀಡಿದರು, ತನಿಖೆಗೆ ಸಹಕರಿಸುತ್ತಿಲ್ಲ. ಇದೀಗ ಮತ್ತೊಂದು ವಿಡಿಯೋ ಸಹಜವಾಗೇ ಹಲವಾರ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
from India & World News in Kannada | VK Polls https://ift.tt/2PvVQ6E