ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಹಿನ್ನೆಲೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗುವಾಹಟಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಇದರಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಹಲವು ಆಶ್ವಾಸನೆಗಳನ್ನು ನೀಡಲಾಗಿದೆ. ಈ ಹಿಂದೆ ಉಂಟಾಗಿದ್ದ ಪ್ರವಾಹಕ್ಕೆ ಸಿಲುಕಿದ 30 ಲಕ್ಷ ಸಂತ್ರಸ್ತ ಕುಟುಂಬಗಳಿಗೆ ಅರುಣೋದಯ ಯೋಜನೆ ಅಡಿ ಪ್ರತಿ ತಿಂಗಳೂ 3,000 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಬ್ರಹ್ಮಪುತ್ರ ಯೋಜನೆ ಅಡಿಯಲ್ಲಿ ಪ್ರವಾಹವನ್ನು ತಡೆಯುವ ಉದ್ದೇಶದಿಂದ ಬ್ರಹ್ಮಪುತ್ರ ನದಿಗೆ ಜಲಾಶಯವನ್ನು ನಿರ್ಮಿಸಲಾಗುವುದು ಎಂದು ಬಿಜೆಪಿ ಭರವಸೆ ನೀಡಿದೆ. ಇನ್ನು ಯುವಕರಿಗೆ ಉದ್ಯೋಗ, ಮಹಿಳೆಯರ ಕಲ್ಯಾಣ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಅಣೆಕಟ್ಟು ನಿರ್ಮಾಣ, ರಸ್ತೆ ನಿರ್ಮಾಣ ಸೇರಿ ವಿವಿಧ ಆಶ್ವಾಸನೆಗಳನ್ನು ಅಸ್ಸಾಂ ಮತದಾರರಿಗೆ ಬಿಜೆಪಿ ನೀಡಿದೆ. ಇನ್ನು ಬಿಜೆಪಿ ಪ್ರಾಣಳಿಕೆ ಬಿಡುಗಡೆ ಮಾತನಾಡಿದ ಜೆಪಿ ನಡ್ಡಾ, ಅಸ್ಸಾಂ ಸುರಕ್ಷತೆ ದೃಷ್ಟಿಯಿಂದ ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ತಿದ್ದುಪಡಿಗೊಳಿಸುವ ಕೆಲಸ ಮಾಡಲಾಗುತ್ತದೆ. ನುಸುಳುಕೋರರನ್ನು ತಡೆಯಲು ಭಾರತೀಯ ಮೂಲ ನಿವಾಸಿಗಳನ್ನು ರಕ್ಷಿಸುವುದಾಗಿ ಈ ವೇಳೆ ಭರವಸೆ ನೀಡಿದರು.
from India & World News in Kannada | VK Polls https://ift.tt/3lIOqcg