4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ ವಿದ್ಯಾರ್ಥಿ ವೇತನ, ಸರ್ಕಾರ ನೀಡ್ತಿದೆ ತಾಂತ್ರಿಕ ದೋಷದ ಕಾರಣ!

ಇರ್ಷಾದ್ ಉಪ್ಪಿನಂಗಡಿ ಬೆಂಗಳೂರು: ರಾಜ್ಯದಲ್ಲಿ 2018-19 ಹಾಗೂ 2010-21 ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಸುಮಾರು 4,04,790 ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ಸಿಗಬೇಕಾದ ಸಿಗದೆ ಪರದಾಡುತ್ತಿದ್ದಾರೆ. ಆದರೆ ಸರ್ಕಾರ ತಾಂತ್ರಿಕ ದೋಷದ ನೆಪ ನೀಡಿ ಬಡ ವಿದ್ಯಾರ್ಥಿಗಳಿಗೆ ಸಿಗಬೇಕಾದ ವಿದ್ಯಾರ್ಥಿ ವೇತನವನ್ನು ತಡೆ ಹಿಡಿದಿದೆ. ರಾಜ್ಯದಲ್ಲಿ 2018 -19ನೇ ಸಾಲು ಮತ್ತು 2019-20 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿ ವತಿಯಿಂದ ವಿದ್ಯಾರ್ಥಿಗಳಿಗೆ ಮಂಜೂರಾಗಬೇಕಾದ ವಿದ್ಯಾರ್ಥಿ ವೇತನ ಬಾಕಿ ಇದೆ. 2018-19 ರಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನದಲ್ಲಿ 15,08,357 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾದರೆ 1,74,057 ವಿದ್ಯಾರ್ಥಿಗಳಿಗೆ ಬಾಕಿ ಇದೆ. ಅದೇ ರೀತಿ 2019-20ರಲ್ಲಿ 14,11,769 ವಿದ್ಯಾರ್ಥಿಗಳಿಗೆ ಮಂಜೂರಾದರೆ 2,30,733 ವಿದ್ಯಾರ್ಥಿಗಳಿಗೆ ಬಾಕಿ ಇದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದಲ್ಲಿ 2018-19 ರಲ್ಲಿ 4,50,486 ವಿದ್ಯಾರ್ಥಿಗಳಿಗೆ ಮಂಜೂರಾದರೆ 4,556 ವಿದ್ಯಾರ್ಥಿಗಳಿಗೆ ಬಾಕಿ ಇದೆ. 2019-20 ರಲ್ಲಿ 4,49,730 ವಿದ್ಯಾರ್ಥಿಗಳಿಗೆ ಮಂಜೂರಾದರೆ 27,381 ವಿದ್ಯಾರ್ಥಿಗಳಿಗೆ ಬಾಕಿ ಇದೆ. ಒಟ್ಟು 4,04,790 ವಿದ್ಯಾರ್ಥಿಗಳಿಗೆ ಇನ್ನೂ ವಿದ್ಯಾರ್ಥಿ ವೇತನ ಸಿಕ್ಕಿಲ್ಲ. ರಾಜ್ಯ ಸರ್ಕಾರದ ಸಮರ್ಥನೆ ಏನು?ವಿದ್ಯಾರ್ಥಿ ವೇತನ ವಿಳಂಬದ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆ ನೀಡಿದೆ. ವಿದ್ಯಾರ್ಥಿ ವೇತನದ ಮೊತ್ತವನ್ನು ಡಿಬಿಟಿ ಪೋರ್ಟಲ್‌ ಮೂಲಕ ವಿದ್ಯಾರ್ಥಿಗಳ ಆಧಾರ್‌ ಜೋಡಿತ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ಬಾಕಿ ಇರುವ ಪ್ರಕರಣಗಳಲ್ಲಿ ವಿದ್ಯಾರ್ಥಿ ಬ್ಯಾಂಕ್‌ ಖಾತೆಯು ಆಧಾರ್ ಜೋಡಣೆಯಾಗದೆ ಇರುವುದರಿಂದ ವಿದ್ಯಾರ್ಥಿ ವೇತನ ಪಾವತಿಸಲು ಸಾಧ್ಯ ಆಗಿಲ್ಲ. ಇನ್ನು ಕೆಲವು ಪ್ರಕರಣಗಳಲ್ಲಿ ಶಿಕ್ಷಣ ಇಲಾಖೆಯ ಎಸ್‌ಎಟಿಎಸ್‌ ಡಾಟಾ ಮತ್ತು ಆಧಾರ್‌ ಹೆಸರು ಮಿಸ್‌ಮ್ಯಾಚ್‌ ಆಗಿರುವುದರಿಂದ ಬಾಕಿ ಇರುತ್ತದೆ. ಇನ್ನು ಕೆಲವು ಪ್ರಕರಣಗಳಲ್ಲಿ ತಾಂತ್ರಿದ ದೋಷ ಕಾರಣ ಎಂದು ಸಮಾಜ ಕಲ್ಯಾಣ ಇಲಾಖೆ ಉತ್ತರ ನೀಡಿದೆ. ಸರ್ಕಾರದ ವಿರುದ್ಧ ಹೋರಾಟ, ಈಶ್ವರ್ ಖಂಡ್ರೆಇನ್ನು ಈ ವಿಚಾರವಾಗಿ 'ವಿಜಯ ವೆಬ್‌ಗೆ' ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ತಾಂತ್ರಿಕ ನೆಪದಲ್ಲಿ ಹಣ ಇಟ್ಟುಕೊಂಡು ಒಂದು ವರ್ಷದವರೆಗೆ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳನ್ನು ಸತಾಯಿಸಲಾಗುತ್ತಿದೆ. ಅದರಲ್ಲೂ ಕೋವಿಡ್‌ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತಗೊಳಿಸಲು ಸರ್ಕಾರದ ಅಸಮರ್ಥ ಆಡಳಿತ ಕಾರಣ ಎಂದು ಆರೋಪಿಸಿದ್ದಾರೆ. ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳೂ ಇದೇ ಸಮಸ್ಯೆಯನ್ನು ಅನುಭವಿಸುತ್ತಿದ್ದು ಮ್ಯಾನೇಜ್ಮೆಂಟ್‌ ಕೋಟಾದಲ್ಲಿ ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಬಾರದು ಎಂದು ನಿರ್ಧಾರ ಮಾಡಿರುವುದರಿಂದ ಈಗಾಗಲೇ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಪಡೆದುಕೊಂಡ ಪರಿಶಿಷ್ಟ ಜಾತಿ ವರ್ಗಗಳು, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಭವಿಷ್ಯ ಏನು? ಎಂದು ಪ್ರಶ್ನಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತಿದೆ. ಇದರ ವಿರುದ್ಧ ಹೋರಾಟ ನಡೆಸುತ್ತೇವೆ. ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೂ ಈ ಕುರಿತಾಗಿ ಪತ್ರವನ್ನು ಬರೆಯಲಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಸಿಗಬೇಕಾದ ಸ್ಕಾಲರ್‌ಶಿಪ್‌ನ್ನು ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ತಾಂತ್ರಿಕ ದೋಷ ಸರಿಪಡಿಸಲು ಕ್ರಮ ಕೈಗೊಂಡು ಬಡ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನಾನುಕೂಲವನ್ನು ಸರಿಪಡಿಸಬೇಕಾಗಿದೆ.


from India & World News in Kannada | VK Polls https://ift.tt/3ch5y5O

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...