ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಅಶ್ಲೀಲ ವಿಡಿಯೊ ಬಹಿರಂಗಗೊಂಡ ಬೆನ್ನಲ್ಲೇ ನ್ಯಾಯಾಲಯದ ಮೊರೆ ಹೋಗಿರುವ ರಾಜ್ಯದ ಆರು ಸಚಿವರು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಮಾನಹಾನಿಕಾರಕ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸಚಿವರಾದ , , , , ಕೆ. ಸಿ. ನಾರಾಯಣ ಗೌಡ ಮತ್ತು ಅವರು ತಮ್ಮ ಮಾನಹಾನಿಯಾಗುವ ಸುದ್ದಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಯಾವ ರೀತಿಯ ಮಾನಹಾನಿಕಾರಕ ಎನ್ನುವುದನ್ನು ಅರ್ಜಿಯಲ್ಲಿ ಹೇಳಿಕೊಂಡಿಲ್ಲ. ಉತ್ತರ ಕರ್ನಾಟಕ ಮೂಲದ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಕೂಡ ಸುಮಾರು 16 ಪ್ರಭಾವಿಗಳ ವಿವಾದಾತ್ಮಕ ವಿಡಿಯೋಗಳಿವೆ ಎಂದು ಹೇಳಿದ್ದರು. ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಇವರನ್ನು 68ನೇ ಪ್ರತಿವಾದಿ ಮಾಡಲಾಗಿದೆ.
from India & World News in Kannada | VK Polls https://ift.tt/3ccal7k