ನೆಲ್ಯಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಕಂಟೇನರ್‌ ಚಾಲಕ ಸ್ಥಳದಲ್ಲೇ ಸಜೀವ ದಹನ!

: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಬಳಿ ನಡೆದ ಖಾಸಗಿ ಬಸ್-ಕಂಟೈನರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಂಟೈನರ್ ಚಾಲಕ ಸಜೀವ ದಹನವಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ನೆಲ್ಯಾಡಿಯ ಮಣ್ಣಗುಂಡಿ ಪ್ರದೇಶದಲ್ಲಿ ಈ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಹಾಸನ ಕಡೆಯಿಂದ ಬರುತ್ತಿದ್ದ ಕಂಟೈನರ್ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಮೆ ಒಮ್ಮೆಲೇ ಎರಡು ವಾಹನಗಳಿಗೆ ಬೆಂಕಿ ಹತ್ತಿಕ್ಕೊಂಡಿದೆ. ಕಂಟೈನರ್ ಚಾಲಕ ಹೊರಬರಲಾಗದೆ ಸಜೀವ ದಹನವಾದರೆ, ಬಸ್‌ನಲ್ಲಿದ್ದವರು ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾರೆ. ಮೂಲಗಳ ಪ್ರಕಾರ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಇದಾಗಿದ್ದು, ಬಸ್‌ನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ತಡರಾತ್ರಿ 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಕಂಟೈನರ್ ಮತ್ತು ಬಸ್‌ ಪರಸ್ಪರ ಡಿಕ್ಕಿಯಾಗಿದೆ. ಕಂಟೈನರ್‌ಗೆ ಗ್ಯಾಸ್ ಬಳಕೆ ಮಾಡಲಾಗುತ್ತಿದ್ದು, ಅಪಘಾತದಿಂದ ಅದು ಸೋರಿಕೆಯಾಗಿ ಬೆಂಕಿ ದೊಡ್ಡ ಮಟ್ಟಕ್ಕೆ ಹತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಗೊಂಡಿರುವವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್‌ ಮತ್ತು ಕಂಟೇನರ್‌ ಸಂಪೂರ್ಣ ಸುಟ್ಟು ಭಸ್ಮವಾಗಿದೆ.


from India & World News in Kannada | VK Polls https://ift.tt/31dcYR8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...