ಯುವತಿ ನನ್ನ ಭೇಟಿಗೆ ಯತ್ನಿಸಿರಬಹುದು, ಆದರೆ ನಾವು ಭೇಟಿ ಮಾಡಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ನಾವು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ ಹೆಣ್ಣು ಮಗಳು ನನ್ನ ಭೇಟಿಗೆ ಪ್ರಯತ್ನಿಸಿದ್ದೆ ಅಂತಾ ಹೇಳಿದ್ದಾಳೆ. ಸಂಕಷ್ಟ ಹೇಳಿಕೊಂಡು ಬಂದವರಿಗೆ ನಾವು ಸಹಾಯ ಮಾಡುತ್ತೇವೆ. ದಿನ ಬೆಳಗಾದರೆ ನನ್ನ ಮನೆ ಬಳಿ ಬಂದು ನೋಡಿ. ಅನೇಕರು ಹಣಕಾಸು ಸಮಸ್ಯೆ, ಸರ್ಕಾರದಿಂದ ತೊಂದರೆ, ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬರುತ್ತಾರೆ. ಅದೇ ರೀತಿ ಯಾರು ಬೇಕಾದರೂ ಬಂದು ಭೇಟಿ ಮಾಡಬಹುದು. ಒಂದು ವೇಳೆ ನಮ್ಮಿಂದ ಯಾರಿಗಾದರೂ ತೊಂದರೆಯಾದರೆ ಆಡಳಿತ ಪಕ್ಷದವರ ಬಳಿ ಹೋಗುತ್ತಾರೆ. ಅದೇ ರೀತಿ ಆ ಯುವತಿ ಬಂದಿರ ಬಹುದು. ನಾನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಒಂದು ವೇಳೆ ಆಕೆ ಬಂದರೂ ನಾನು ಪರಿಶೀಲನೆ ಮಾಡುತ್ತೇನೆ. ನಮ್ಮ ಸರ್ಕಾರದ ಶಾಸಕರನ್ನು ಸೆಳೆಯುತ್ತೇವೆ ಎಂದಾಗ ಅವರನ್ನು ಟ್ರ್ಯಾಕ್ ಮಾಡಿದ್ದು ನಿಜ. ಯಾರು ಯಾರ ಜತೆ ಮಾತನಾಡುತ್ತಿದ್ದಾರೆ, ಎಲ್ಲಿ ಹೋಗುತ್ತಿದ್ದಾರೆ ಎಂದು ಗಮನಿಸಿದ್ದೆವು. ಆದರೆ ಇದು ಅವರ ವೈಯಕ್ತಿಕ ವಿಚಾರ. ಅದರ ಅವಶ್ಯಕತೆ ನಮಗಿಲ್ಲ ಎಂದರು. ನರೇಶ್ ಮಾಧ್ಯಮದ ವ್ಯಕ್ತಿ. ನನಗೆ ಪರಿಚಯಸ್ಥ. ನನಗೆ ಬೇಕಾದ ಹುಡುಗ. ಅವರ ಮನೆಗೂ ಹೋಗಿದ್ದೇನೆ. ಅನೇಕ ಬಾರಿ ಭೇಟಿ ಮಾಡಿದ್ದು, ಅನೇಕ ವಿಚಾರಗಳನ್ನು ಆತ ಹಂಚಿಕೊಂಡಿದ್ದ. ಅವರು ನನ್ನನ್ನು ಸ್ಮರಿಸಿಕೊಂಡರೆ, ನಾನ್ಯಾಕೆ ಬೇಡ ಎನ್ನಲಿ. ನನ್ನ ಬಗ್ಗೆ ಅವರಿಗೆ ಅನುಕಂಪ ಇರುವುದಕ್ಕೆ ಬಹಳ ಸಂತೋಷ ಎಂದರು. ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಅವರಿಗೆ ಅವರದೇ ಆದ ಘನತೆ ಇದೆ. ಅವರು ಸೂಕ್ತ ರಕ್ಷಣೆ ನೀಡುತ್ತಾರೆ. ಯುವತಿ ಪೋಷಕರು ಯಾರ ಬಳಿ ಇದ್ದಾರೆ ಅಂತಾ ನನಗೆ ಗೊತ್ತಿಲ್ಲ. ಅದು ಆ ಯುವತಿಗೇ ಗೊತ್ತು. ನಾನು ಅದನ್ನು ಯಾಕೆ ಟ್ರ್ಯಾಕ್ ಮಾಡಲಿ ಎಂದು ತಿಳಿಸಿದರು.


from India & World News in Kannada | VK Polls https://ift.tt/3rrH9yD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...