ನಟ ಶಿವಣ್ಣ, ಸಿ.ಟಿ ರವಿ ಸೇರಿದಂತೆ ನಾಲ್ವರು ಗಣ್ಯರಿಗೆ ಕೊಲೆ ಬೆದರಿಕೆ ಪತ್ರ! ಮಾಹಿತಿ ಬಹಿರಂಗ

ಬೆಂಗಳೂರು: ಮೇ 1ರಂದು ನಾಲ್ಕು ಮಂದಿ ಗಣ್ಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಹೇಳಿಕೆ ನೀಡಿದ್ದಾರೆ. ಮಾಜಿ ಸಚಿವ ಎಚ್‌.ಎಂ. ರೇವಣ್ಣ ಸಾರ್ವಜನಿಕ ಜೀವನದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಎಚ್‌.ಎಂ. ರೇವಣ್ಣ ಪ್ರತಿಷ್ಠಾನದಿಂದ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನೆ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಈ ವೇಳೆ ‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪತ್ರಕರ್ತ ಎಚ್‌.ಆರ್‌. ರಂಗನಾಥ್‌, ನಟ ಶಿವರಾಜ್‌ಕುಮಾರ್‌ ಹಾಗೂ ನನ್ನನ್ನು ಕೊಲೆ ಮಾಡುವುದಾಗಿ ಬಂದ ಪತ್ರದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದರು. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ ಎಂದು ನಿಗೂಡಾರ್ಥವಾಗಿ ಹೇಳಿದರು. ಈ ಬೆದರಿಕೆಗಳಿಗೆ ನಾನು ಹೆದರುವಳು ಅಲ್ಲ. ಕೊಲೆ ಮಾಡುವರು ಎಲ್ಲಿದ್ದರೂ ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೇ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ ಎಂದು ಲಲಿತಾ ನಾಯಕ್ ಆತಂಕ ವ್ಯಕ್ತಪಡಿಸಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಹಿರಿಯ ಲೇಖಕಿ ಬಿ.ಟಿ.ಲಲಿತಾ ನಾಯಕ್ ಸಹಿತ ನಾಲ್ಕೈದು ಗಣ್ಯರ ಹತ್ಯೆ ಬೆದರಿಕೆ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಲಿದೆ. ಕೊಲೆ ಬೆದರಿಕೆ ಪತ್ರದ ಬಗ್ಗೆ ಲಲಿತಾ ನಾಯಕ್ ಅವರು ಪೋಲೀಸರಿಗೆ ದೂರು ನೀಡಿದ್ದಾರೆಂದು ಗೊತ್ತಾಗಿದೆ. ಕೊಲೆ ಬೆದರಿಕೆ ಪ್ರಕರಣದ ಬಗ್ಗೆ ಪೋಲೀಸರು ತನಿಖೆ ನಡೆಸಲಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಬೆದರಿಕೆ ಪತ್ರದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂಜಯನಗರ ಪೊಲೀಸರು, ಬೆದರಿಕೆ ಪತ್ರದ ಕುರಿತು ದೂರು ಸ್ವೀಕರಿಸಲಾಗಿದೆ. ಪರಿಶೀಲನೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


from India & World News in Kannada | VK Polls https://ift.tt/3c7TOT5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...