ಅತ್ತ ಸದನದಲ್ಲಿ ಸಿ.ಡಿ ವಿವಾದದ ಬಿಸಿಬಿಸಿ ಚರ್ಚೆ; ಇತ್ತ ಗೃಹಸಚಿವರನ್ನು ಭೇಟಿಯಾದ ಎಸ್‌ಐಟಿ ಮುಖ್ಯಸ್ಥ!

ಬೆಂಗಳೂರು: ರಮೇಶ್‌ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಖ್ಯಸ್ಥ ಗೃಹಸಚಿವರನ್ನು ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ. ಅತ್ತ ವಿಧಾನಸೌಧದಲ್ಲಿ ವಿಪಕ್ಷ ಕಾಂಗ್ರೆಸ್‌, ಸಿ.ಡಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಸ್‌ವೈ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿರುವ ಬೆನ್ನಲ್ಲೇ, ಇತ್ತ ಸೌಮೇಂದು ಮುಖರ್ಜಿ ಅವರು ಗೃಹಸಚಿವ ಅವರನ್ನು ಭೇಟಿಯಾಗಿದ್ದಾರೆ. ವಿಧಾನಸೌಧದಲ್ಲೇ ಗೃಹ ಸಚಿವ ಬೊಮ್ಮಾಯಿ ಅವರನ್ನು ಸೌಮೇಂದು ಮುಖರ್ಜಿ ಭೇಟಿಯಾಗಿ ಚರ್ಚೆ ನಡೆಸಿರೋದು ಭಾರೀ ಕುತೂಹಲ ಮೂಡಿಸಿದೆ. ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗ ಪ್ರಕರಣ ಮತ್ತು ಬಿಎಸ್‌ವೈ ಸರ್ಕಾರದ ಆರು ಸಚಿವರು ಕೋರ್ಟ್‌ ಮೆಟ್ಟಿಲೇರಿರುವುದರ ಕುರಿತಂತೆ ಸದನದಲ್ಲಿ ಭಾರೀ ಚರ್ಚೆ ನಡೆಯುತ್ತಿರುವ ಹಿನ್ನೆಲ್ಲೆಯಲ್ಲಿ ಗೃಹ ಸಚಿವ ಬೊಮ್ಮಾಯಿ ಅವರನ್ನು ಸೌಮೇಂದು ಮುಖರ್ಜಿ ಭೇಟಿಯಾಗಿ ಚರ್ಚೆ ನಡೆಸಿರೋದು ಭಾರೀ ಮಹತ್ವ ಪಡೆದುಕೊಂಡಿದೆ. ಮೂಲಗಳ ಪ್ರಕಾರ ಎಸ್‌ಐಟಿ ಮುಖ್ಯಸ್ಥರೊಂದಿಗೆ ಪ್ರಕರಣದ ತನಿಖೆಯ ಕುರಿತಂತೆ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.


from India & World News in Kannada | VK Polls https://ift.tt/316wDSv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...