ಕೇರಳ ಗಡಿಯಲ್ಲಿ ಕಾರಿನ ತಪಾಸಣೆ ವೇಳೆ ವಿಟ್ಲ ಎಸ್ ಐ ಮೇಲೆ ಗುಂಡು ಹಾರಾಟ: ಆರೋಪಿ ಬಂಧನ

ವಿಟ್ಲ: ಕೇರಳ ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಗಡಿಯೊಳಗೆ ಪ್ರವೇಶಿಸುತ್ತಿದ್ದ ಕಾರನ್ನು ಪೊಲೀಸರು ತಡೆದಾಗ ಕಾರಿನಲ್ಲಿದ್ದ ದುಷ್ಕರ್ಮಿಯೊಬ್ಬ ವಿಟ್ಲ ಪೊಲೀಸ್‌ ಠಾಣೆಯ ಎಸ್ ಐ ಮೇಲೆ ಗುಂಡು ಹಾರಿಸಿದ ಘಟನೆ ಸಾಲೆತ್ತೂರು ಕೋಡಂಗೆ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯ ಎಸ್‌ಐ ವಿನೋದ್ ಗುಂಡು ಹಾರಾಟದಿಂದ ಗಾಯಗೊಂಡವರು.ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ ನಟೋರಿಯಸ್‌ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಕೂಡಲೇ ಕಾರ್ಯಾಚರಣೆ ಮೂಲಕ ಪೊಲೀಸರು ಸೆರೆ ಹಿಡಿದಿದ್ದಾರೆ. ಘಟನೆ ವಿವರ!ಕೇರಳ ಕಡೆಯಿಂದ ಈ ಕಾರು ವಿಟ್ಲದತ್ತ ಆಗಮಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನಲೆ ವಿಟ್ಲ ಪೊಲೀಸರು ಸಾಲೆತ್ತೂರು ಕೋಡಂಗೆ ಚೆಕ್ ಪೋಸ್ಟ್ ಗಡಿಯಲ್ಲಿ ಕಾರ್ಯಪ್ರವೃತ್ತರಾದರು. ಕಾರು ಬರುತ್ತಿದ್ದಂತೆ ತಡೆದು ನಿಲ್ಲಿಸಿ ತಪಾಸಣೆ ನಡೆಸಲು ಯತ್ನಿಸಿದಾಗ ಆರೋಪಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅರೆಸ್ಟ್‌ ಮಾಡಿದ್ದಾರೆ. ಸದ್ಯ ಕೇರಳದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಈ ಪರಾರಿ ಯತ್ನದ ಹಿಂದೆ ಚುನಾವಣೆಯ ನಂಟು ಇರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಕೇರಳಗಡಿಯ ತಲಪಾಡಿಯಲ್ಲಿ ಲಕ್ಷ ಲಕ್ಷ ಅಕ್ರಮ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.


from India & World News in Kannada | VK Polls https://ift.tt/31k8U1n

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...