ದೀದಿಗೆ ಪ್ರಶ್ನಿಸಿದಷ್ಟೂ ಅವರ ಸಿಟ್ಟು ಹೆಚ್ಚಾಗುತ್ತಿದೆ..!: ಪ್ರಧಾನಿ ಮೋದಿ ಚಾಟಿ

ಬಂಕುರಾ (ಪಶ್ಚಿಮ ಬಂಗಾಳ): ನಾನು ಅವರನ್ನು ಪ್ರಶ್ನಿಸಿದಷ್ಟೂ ಅವರ ಸಿಟ್ಟು ಹೆಚ್ಚಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಇಲ್ಲಿನ ಬಂಕುರಾದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಜಾಪ್ರಭುತ್ವ ಒಂದು ಸಾರ್ವಜನಿಕ ಸೇವೆ ಎಂದು ಹೇಳಿದ್ದಾರೆ. ಯಾವುದೇ ವ್ಯಕ್ತಿತ್ವದ ಪರೀಕ್ಷೆಗೆ ವೇದಿಕೆಯಲ್ಲ ಎಂದೂ ಅವರು ಬುದ್ದಿಮಾತು ಹೇಳಿದ್ದಾರೆ. ಈಗಾಗಲೇ ಇವಿಎಂ ಕುರಿತಾಗಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಇದೇ ಇವಿಎಂ ಮಮತಾ ಅವರನ್ನು ಗೆಲ್ಲಿಸಿತ್ತು. ಇವಿಎಂ ಬಗ್ಗೆ ಪ್ರಶ್ನೆ ಎತ್ತುವ ಮೂಲಕ ದೀದಿ ಈಗಾಗಲೇ ತಮ್ಮ ಸೋಲನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟ ಪ್ರಧಾನಿ ಮೋದಿ, ಬಂಗಾಳದ ಪ್ರತಿಯೊಬ್ಬ ಮತದಾರನೂ ನಿರ್ಭೀತಿಯಿಂದ ಮತ ಹಾಕಿ, ತಮ್ಮ ಅಧಿಕಾರ ಚಲಾಯಿಸಬೇಕು ಎಂದು ಕರೆ ನೀಡಿದರು. ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ತರಲು ಬಿಜೆಪಿಯನ್ನು ಅಧಿಕಾರಕ್ಕೆ ತರುವ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, ಬಿಜೆಪಿ ಅಭಿವೃದ್ಧಿಗೆ ಪ್ರಧಾನ ಆದ್ಯತೆ ನೀಡುತ್ತದೆ ಎಂದು ಭರವಸೆ ನೀಡಿದರು. ಬಂಗಾಳಕ್ಕೆ ಬಿಜೆಪಿ ಸರ್ಕಾರ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು.


from India & World News in Kannada | VK Polls https://ift.tt/3eXJyhW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...