ರಾಜ್ಯದಲ್ಲಿ ಸೋಂಕು ಹೆಚ್ಚಾದರೆ ಶಾಲೆ ಬಂದ್‌ ಚಿಂತನೆ: ಸಲಹಾ ಸಮಿತಿ ಸಲಹೆ ಬಳಿಕ ಸಚಿವ ಸುಧಾಕರ್ ಹೇಳಿಕೆ

ಬೆಂಗಳೂರು: ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶಾಲೆಗಳನ್ನು ಬಂದ್‌ ಮಾಡುವ ಕುರಿತು ಸಿಎಂ ಜತೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ''ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲಿ ಸಾವಿರ ಗಡಿ ದಾಟಿದೆ. ಕೋವಿಡ್‌ ಬಗ್ಗೆ ಜನಸಾಮಾನ್ಯರ ನಡವಳಿಕೆ ಬದಲಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಸೋಂಕು ಬಂದಾಗ ಸರಕಾರ ಹಾಗೂ ಆರೋಗ್ಯ ಇಲಾಖೆ ಲಸಿಕೆ ಕೊಡಬಹುದು. ಆದರೆ ಜನರು ಸರಿಯಾದ ಕ್ರಮ ಅನುಸರಿಸದಿದ್ದರೆ ಮುಂದೆ ಕೊರೊನಾ ಹೆಚ್ಚಾಗಿ ಕಾಡಲಿದ್ದು, ಸರಕಾರದಿಂದ ನಿಯಂತ್ರಣ ಸಾಧ್ಯವಿಲ್ಲ'' ಎಂದರು. ''ಎರಡನೇ ಅಲೆ ನಿಯಂತ್ರಣ ಮಾಡಬೇಕಿದ್ದು, ಯುವಕರ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಸಮಸ್ಯೆ ಎದುರಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ತಜ್ಞರ ವರದಿ ಆಧರಿಸಿ ಜನರು ಸಹಕರಿಸದಿದ್ದರೆ ಮುಂದೆ ಕಷ್ಟವಾಗಲಿದೆ. ಪಾರ್ಟಿ, ಜಾತ್ರೆ ಎಂದು ರಿಯಾಯಿತಿ ನೀಡಲ್ಲ, ಈ ವೇಳೆ ಯಾವ ಕಾರ್ಯಕ್ರಮ ಮಾಡಬೇಕು ಎಂಬುದನ್ನು ಜನರೇ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಸರ್ವಪಕ್ಷ ಸಭೆಗೆ ಮನವಿ ಕೊರೊನಾ ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿ, ಸರ್ವಪಕ್ಷಗಳ ಸಭೆ ಕರೆಯಲು ಸಿಎಂಗೆ ಮನವಿ ಮಾಡುತ್ತೇನೆ'' ಎಂದರು.


from India & World News in Kannada | VK Polls https://ift.tt/313hxNA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...