ಕಳ್ಳನ ಮನಸು ಹುಳ್‌ಹುಳ್ಳಗೆ!; ಸಚಿವ ಸುಧಾಕರ್‌ ನೀಡಿದ ‘ಏಕಪತ್ನಿವ್ರತಸ್ಥ’ ಹೇಳಿಕೆಗೆ ಕಾಂಗ್ರೆಸ್‌ ಟಾಂಗ್

ಬೆಂಗಳೂರು: ಕಳ್ಳನ ಮನಸು ಹುಳ್‌ಹುಳ್ಳಗೆ ಎಂದು ಕರ್ನಾಟಕ ಕಾಂಗ್ರೆಸ್, ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ಟಾಂಗ್‌ ನೀಡಿದೆ. ಸುಧಾಕರ್‌ ಹೇಳಿಕೆ ಅವರ ವ್ಯಕ್ತಿತ್ವವನ್ನು ಮಾತ್ರವಲ್ಲದೆ ಇಡೀ ಬಿಜೆಪಿಯ ವಿಕೃತ ಮನಸ್ಥಿತಿಯನ್ನು ಅನಾವರಣಗೊಳಿಸಿದೆ ಎಂದು ಕಿಡಿಕಾರಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಕೆ.ಆರ್ ರಮೇಶ್ ಕುಮಾರ್‌, ಮುನಿಯಪ್ಪ ಸೇರಿದಂತೆ ರಾಜ್ಯದ ಎಲ್ಲಾ 225 ಮಂದಿ ಶಾಸಕರ ಶೀಲ ಶಂಕಿಸುವ ಹೇಳಿಕೆಯನ್ನು ಸಚಿವ ಸುಧಾಕರ್‌ ನೀಡಿದ್ದರು. ಇವರೆಲ್ಲಾ ಸತ್ಯಹರಿಶ್ಚಂದ್ರರಾ ಎಂದು ಪ್ರಶ್ನೆ ಮಾಡಿದ್ದ ಸುಧಾಕರ್, ಎಲ್ಲಾ ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದರು. ಸುಧಾಕರ್‌ ಈ ಹೇಳಿಕೆ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಸುಧಾಕರ್‌ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಕಳ್ಳನ ಮನಸು ಹುಳ್‌ಹುಳ್ಳಗೆ ಎನ್ನುವಂತೆ ತಾವು ಮಾಡಿದ ಅನಾಚಾರ ಹೊರಬರದಂತೆ ತಡೆಯಾಜ್ಞೆ ತಂದಿದ್ದಲ್ಲದೆ ಇತರರ ಮೇಲೂ ವ್ಯಭಿಚಾರದ ಆರೋಪ ಹೊರಿಸಿದ್ದು ಸ್ವತಃ ಬಿಜೆಪಿ ಪಕ್ಷದ ಕೆಲವು ಶಾಸಕರಿಗೆ ಮುಜುಗರವಾಗಿದೆ. ಸುಧಾಕರ್‌ ಮಾತು ಬರೀ ಅವರ ವ್ಯಕ್ತಿತ್ವವನ್ನಷ್ಟೇ ಅಲ್ಲ ಇಡೀ ಬಿಜೆಪಿಯ ವಿಕೃತ ಮನಸ್ಥಿತಿಯನ್ನು ಅನಾವರಣಗೊಳಿಸಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಸುಧಾಕರ್‌ ಹೇಳಿಕೆಯನ್ನು ಖಂಡಿಸಿ ಹಾಗೂ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈಗಾಗಲೇ ಸ್ವೀಕರ್‌ ಹಾಗೂ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಈ ಕುರಿತಾಗಿ ಎಸ್‌ಐಟಿ ತನಿಖೆ ನಡೆದರೆ ತನಿಖೆಗೆ ಒಳಪಡಲು ನಾವೆಲ್ಲರೂ ಸಿದ್ಧ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ ಬಿಜೆಪಿ ಶಾಸಕರೂ ಸುಧಾಕರ್‌ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸುಧಾಕರ್‌ ವಿಷಾದ ವ್ಯಕ್ತಪಡಿಸಿದ್ದು, ತಮ್ಮ ಹೇಳಿಕೆಯನ್ನು ಶಬ್ದಶಃ ಅರ್ಥೈಸಿಕೊಳ್ಳದೆ ನಮ್ಮ ಭಾವನೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.


from India & World News in Kannada | VK Polls https://ift.tt/2P8YsHv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...