ಕಾಂಗ್ರೆಸ್‌ ಪ್ರತಿಭಟನೆಯ ಮಧ್ಯೆಯೂ ಬಜೆಟ್‌ ಮೇಲಿನ ಚರ್ಚೆಗೆ ಸಿಎಂ ಬಿಎಸ್‌ವೈ ಉತ್ತರ

ಬೆಂಗಳೂರು: ವಿಧಾನಸಭೆಯಲ್ಲಿ ಸದನ ಆರಂಭ ಆಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಇಂದು ಕೂಡ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸದನ ಆರಂಭವಾಗುತ್ತಿದ್ದಂತೆ ಸದನದ ಬಾವಿಗೆ ಇಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್‌ ಸದಸ್ಯರ ಪ್ರತಿಭಟನೆ ಮೂರನೇ ದಿನಕ್ಕೆ ಮುಂದುವರಿದಿದೆ. ಈ ವೇಳೆ ಸ್ಪೀಕರ್ ಬಳಿ ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ಈ ಪ್ರತಿಭಟನೆ ಸಂವಿಧಾನದ ವಿರುದ್ಧ, ಪ್ರಜಾಪ್ರಭುತ್ವ ವಿರುದ್ಧವಾಗಿದೆ, ಸದನ ಕಾರ್ಯಕಲಾಪ ನಿಲ್ಲಿಸುವುದು ಬೇಡ ಎಂದು ಮನವಿ ಮಾಡಿದರು. ಅಲ್ಲದೇ ಕಾಂಗ್ರೆಸ್ ಬೇಜವಾಬ್ದಾರಿ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಇವರಿಗೆ ನಾಚಿಕೆ ಆಗಬೇಕು, ರಮೇಶ್ ಜಾರಕಿಹೊಳಿ‌ ರಾಜೀನಾಮೆ ಕೊಟ್ಟರೂ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದರು. ಈ ಮಧ್ಯೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಮೇಟಿ ಪ್ರಕರಣದಲ್ಲಿ ಎಫ್‌ಐಆರ್ ದಾಖಲು ಮಾಡಿಲ್ಲ ಕಾಂಗ್ರೆಸ್, ಆದರೆ ಇಲ್ಲಿ ಯುವತಿ ದೂರು ನೀಡಿಲ್ಲ, ಹೀಗಾದರೂ ಅತ್ಯಾಚಾರ ಪ್ರಕರಣ ದಾಖಲು ಮಾಡಬೇಕು ಎಂದು ಕಾಂಗ್ರೆಸ್ ಬೇಡಿಕೆ ಸರಿಯಲ್ಲ ಎಂದರು. ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದ್ದಂತೆ ಬಜೆಟ್ ಮೇಲಿನ ಚರ್ಚೆಗೆ ಸಿಎಂ ಯಡಿಯೂರಪ್ಪ ಉತ್ತರ ನೀಡಲು ಪ್ರಯತ್ನಿಸಿದರು. ಜೊತೆಗೆ ಸಿದ್ದರಾಮಯ್ಯ ಅವರಿಗೆ ಚರ್ಚೆಗೆ ಅವಕಾಶ ಕೊಡುವಂತೆ ಯಡಿಯೂರಪ್ಪ ಮನವಿ ಮಾಡಿದರು. ಈ ವೇಳೆ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಲೂ ಅವಕಾಶ ಕೊಡದೆ ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯ ಮಧ್ಯೆಯೂ ಮಾತನಾಡಿದ , ಬಜೆಟ್ ಮೇಲೆ ಸಿದ್ದರಾಮಯ್ಯ, ರಮೇಶ್ ಕುಮಾರ್, ಶಿವಲಿಂಗೇಗೌಡ, ಎಟಿ ರಾಮಸ್ವಾಮಿ ಸೇರಿದಂತೆ ಶಾಸಕರು ಭಾಗಿಯಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಟೀಕೆ ಟಿಪ್ಪಣಿಗೆ ಸ್ಪಂದಿಸಿ ಕೊರತೆಗಳನ್ನು ಸರಿಪಡಿಸುವ ಭರವಸೆ ನೀಡುತ್ತೇನೆ. ಕೋವಿಡ್ ನಿಯಂತ್ರಣಕ್ಕೆ ತಜ್ಞರ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಎಲ್ಲಾ ಜಿಲ್ಲೆಗಳಿಗೆ ಒಂದಲ್ಲಾ ಒಂದು ಯೋಜನೆ ಘೋಷಣೆ ಮಾಡಲಾಗಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ಕೊಡಲಾಗಿದೆ ಎಂದು ಪತ್ರಿಕಾ ವರದಿಗಳು ಹಾಗೂ ಬಜೆಟ್ ವಿಶ್ಲೇಷಣೆಗಳನ್ನು ಯಡಿಯೂರಪ್ಪ ಉಲ್ಲೇಖಿಸಿದರು.


from India & World News in Kannada | VK Polls https://ift.tt/39bKknH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...