ಕೇರಳದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ, ಚೆಕ್‌ಪೋಸ್ಟ್‌ಗಳಲ್ಲಿ ಪ್ರಯಾಣಿಕರಿಗೆ ನೆಗೆಟಿವ್‌ ವರದಿ ಕಡ್ಡಾಯಕ್ಕೆ ಚಿಂತನೆ

ಸ್ಟೀವನ್‌ ರೇಗೊ ಮಂಗಳೂರು ಕೇರಳದಲ್ಲಿ ಪ್ರಕರಣ ಏರುಗತಿಯಲ್ಲಿ ಸಾಗುತ್ತಿರುವುದರಿಂದ ಕರ್ನಾಟಕಕ್ಕೆ ಪ್ರವೇಶಿಸುವ ಚೆಕ್‌ಪೋಸ್ಟ್‌ಗಳಲ್ಲಿ ಮತ್ತೆ ಕೋವಿಡ್‌ ನೆಗೆಟಿವ್‌ ವರದಿ ಜತೆಯಲ್ಲಿ ಓಡಾಟ ನಡೆಸುವುದು ಕೆಲವೇ ದಿನಗಳಲ್ಲಿ ಕಡ್ಡಾಯವಾಗುವ ಸೂಚನೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯಿಂದ ಹೊರಬೀಳುವ ಸಾಧ್ಯತೆಯಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಸೂಚನೆ ಪ್ರಕಾರ ಹಾಗೂ ಮಹಾರಾಷ್ಟ್ರಗಳಿಂದ ಬರುವ ಸರಕು ಸಾಗಾಧಿಟ ವಾಹನಗಳ ಚಾಲಕರು ಹಾಗೂ ಸಹಾಯಕರು ಕಡ್ಡಾಯವಾಗಿ 15 ದಿನಗಳಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ವರದಿ ಹೊಂದಿರಬೇಕು ಎಂದು ತಿಳಿಸಿದ್ದಾರೆ. ಕೇರಳದಿಂದ ಬರುವ ಪ್ರಯಾಣಿಕರಿಗೆ ಕೂಡ ಆರ್‌ಟಿ-ಪಿಸಿಆರ್‌ ವರದಿಯನ್ನು 15 ದಿನಗಳಿಗೊಮ್ಮೆ ತರಬೇಕು ಅಥವಾ ಮಾಡಿಸಿದ ಕುರಿತು ಮೆಸೇಜ್‌ ಇದ್ದರೂ ಸಾಕು ಎಂದು ದ.ಕ. ಜಿಲ್ಲಾಆರೋಗ್ಯಾಧಿಕಾರಿಗಳು ಪದೇ ಪದೆ ಪ್ರಯಾಣಿಕರಿಗೆ ಸೂಚನೆ ನೀಡುತ್ತಿದ್ದಾರೆ. ಆರ್‌ಟಿಪಿಸಿಆರ್‌ ಕಡ್ಡಾಯಕ್ಕೆ ಚಿಂತನೆ: ಮಾ.5ರಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯಲ್ಲಿಈ ಕುರಿತು ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಆದರೆ ಈ ಸಭೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಕೆಲವೇ ದಿನಗಳಲ್ಲಿ ಸಭೆಯ ದಿನ ನಿಗದಿಯಾಗಲಿದೆ. ಇದರಲ್ಲಿ ಕೇರಳದ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿಸಿಪಿಆರ್‌ ಪರೀಕ್ಷೆಯನ್ನು ಕನಿಷ್ಠ 15 ದಿನಗಳಿಗೊಮ್ಮೆ ಮಾಡಿಸಿಕೊಂಡು ಬರಬೇಕು ಎನ್ನುವುದು ಬಹುಮುಖ್ಯವಾಗಿ ಚರ್ಚೆಗೆ ಬರಲಿರುವ ವಿಚಾರವಾಗಲಿದೆ. ಇದರಲ್ಲಿ ಅಂತಿಮ ನಿರ್ಧಾರ ಹೊರಬಂದ ಬಳಿಕ ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿ ಸೇರಿದಂತೆ ಲ್ಯಾಬ್‌ ಟೆಕ್ನಿಷಿಯನ್‌ಗಳನ್ನು ನಿಯೋಜನೆ ಮಾಡುವ ಕುರಿತು ನಿರ್ಧಾರವಾಗಲಿದೆ. ಕೇರಳದ ಪ್ರತಿಯೊಬ್ಬರ ಓಡಾಟದ ವಿಚಾರದಲ್ಲಿ ಕನಿಷ್ಠ 15 ದಿನಗಳಿಗೊಮ್ಮೆಯಾದರೂ ಆರ್‌ಟಿ-ಪಿಸಿಆರ್‌ ಕಡ್ಡಾಯವಾಗಿದೆ ಎಂದು ಆರೋಗ್ಯ ಇಲಾಖೆಯ ಕಮಿಷನರ್‌ ಸೂಚನೆ ಕೊಟ್ಟಿದ್ದಾರೆ. ಇದರ ಪ್ರಕಾರ ನಾವು ಕೂಡ ಅದೇ ರೀತಿಯಲ್ಲಿ ಕೆಲಸ ಮಾಡುತ್ತಾ ಬರುತ್ತಿದ್ದೇವೆ ಎನ್ನುತ್ತಾರೆ ದ.ಕ. ಜಿಲ್ಲಾಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ. ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ಕೇರಳ ಹಾಗೂ ಕರ್ನಾಟಕದ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕೋವಿಡ್‌ ವಿಚಾರಕ್ಕೆ ಸಂಬಂಧಪಟ್ಟಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡ ಕುರಿತು ಕೇರಳ ಸರಕಾರ ಹೈಕೋರ್ಟ್‌ನಲ್ಲಿ ದಾವೆ ಹೂಡಿದ ಪರಿಣಾಮ ಮಾ.5ರಂದು ವಿಚಾರಣೆ ನಡೆಯಲಿದೆ. ಈಗಾಗಲೇ ಸಂಬಂಧಪಟ್ಟವರಿಗೆ ಈ ವಿಚಾರಣೆಯಲ್ಲಿ ಭಾಗವಹಿಸಲು ಹೈಕೋರ್ಟ್‌ ಸೂಚಿಸಿದ್ದು, ಸಂಬಂಧಪಟ್ಟವರು ದಾಖಲೆ ಸಹಿತ ಹಾಜರಾಗಲಿದ್ದಾರೆ. ಇಲ್ಲಿಕೂಡ ಕೇರಳದ ಗಡಿ ವಿಚಾರದ ಕುರಿತು ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಕಾರ‍್ಯ ನಡೆಯುತ್ತಿದೆ. ಮುಂದೆ ಯಾವ ರೀತಿಯಲ್ಲಿ ತಪಾಸಣೆ ಮಾಡಬೇಕು ಎನ್ನುವ ವಿಚಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಬಳಿಕ ನಿರ್ಧಾರವಾಗಲಿದೆ. ತಲಪಾಡಿಯಲ್ಲಿ ಸಾಕಷ್ಟು ವಾಹನ ದಟ್ಟಣೆ ಇರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚುವರಿ ಸಿಬ್ಬಂದಿ ಜತೆಯಲ್ಲಿಕೆ ಲಸ ಮಾಡಬೇಕಾದ ಅನಿವಾರ್ಯತೆ ಬಂದಿದೆ. -ಡಾ.ರಾಮಚಂದ್ರ ಬಾಯರಿ, ದ.ಕ. ಜಿಲ್ಲಾಆರೋಗ್ಯಾಧಿಕಾರಿ ಸಭೆಯ ದಿನವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಇದಕ್ಕೆ ಅಂತಿಮ ದಿನವನ್ನು ಶೀಘ್ರದಲ್ಲಿಯೇ ನಿಗದಿ ಮಾಡಲಾಗುತ್ತದೆ. ಈ ಸಭೆಯಲ್ಲಿಈ ಕುರಿತು ಪೂರ್ಣ ಮಾಹಿತಿ ಹಾಗೂ ವಹಿಸಿಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. -ಡಾ. ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ


from India & World News in Kannada | VK Polls https://ift.tt/3e73PRL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...