'ಸಿ.ಡಿ ಯುವತಿ' ಹಿಂದೆ ಕಾಂಗ್ರೆಸ್: ಯಾವ ಪುರುಷಾರ್ಥಕ್ಕೆ ಧರಣಿ ಎಂದ ರೇಣುಕಾಚಾರ್ಯ!

ಬೆಂಗಳೂರು: ಮಾಜಿ ಸಚಿವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್‌ನ್ನು, ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಎಂಪಿ ರೇಣುಕಾಚಾರ್ಯ, ಸಿ.ಡಿ ಪ್ರಕರಣವನ್ನೇ ಮುಂದೆ ಮಾಡಿ ಕಾಂಗ್ರೆಸ್ ಕೀಳು ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದರು. ಸಿ.ಡಿ ಯುವತಿಗೆ ಕಾಂಗ್ರೆಸ್ ಬೆಂಬಲವಿದ್ದು, ಆಕೆಯನ್ನು ಮುಂದೆ ಬಿಟ್ಟು ಕಾಂಗ್ರೆಸ್‌ನವರು ಕೀಳು ಮಟ್ಟದ ರಾಜಕಾರಣಕ್ಕೆ ಇಳಿದಿದ್ದಾರೆ ಎಂದು ರೇಣುಕಾಅಚಾರ್ಯ ಗಂಭೀರ ಆರೋಪ ಮಾಡಿದರು. ರಮೇಶ್ ಜಾರಕಿಹೊಳಿ ಈಗಾಗಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಸಿ.ಡಿಯಲ್ಲಿರುವ ಯುವತಿ ಇದುವರೆಗೂ ಪತ್ತೆಯಾಗಿಲ್ಲ. ಎಸ್‌ಐಟಿ ತನಿಖೆ ಮುಗಿದ ಬಳಿಕ ಎಲ್ಲವೂ ಬಹಿರಂಗವಾಗಲಿದೆ ಎಂದು ರೇಣುಕಾಚಾರ್ಯ ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್‌ನವರು ಯಾವ ಪುರುಷಾರ್ಥಕ್ಕೆ ಈ ಧರಣಿ ಮಾಡುತ್ತಿದ್ದಾರೋ ಗೊತ್ತಿಲ್ಲ. ಅಧಿವೇಶನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುವುದೇ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ರೇಣುಕಾಚಾರ್ಯ ಕಿಡಿಕಾರಿದರು. ಆರು ಸಚಿವರ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ ನಡೆಸಿದ್ದು, ಇದೇ ಕಾರಣಕ್ಕೆ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆತ್ಮ ಸ್ವಾಭಿಮಾನ ಇರುವ ಯಾರೇ ಆದರೂ ಇದನ್ನೇ ಮಾಡುತ್ತಿದ್ದರು ಎಂದು ರೇಣುಕಾಚಾರ್ಯ ಅಭಿಪ್ರಾಯಪಟ್ಟರು. ಕಲಾಪ ಸುಗಮವಾಗಿ ನಡೆಯುವುದು ಕಾಂಗ್ರೆಸ್‌ಗೆ ಬೇಡವಾಗಿದೆ. ರಾಜ್ಯದ ಜನರೇ ಇವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ರೇಣುಕಾಚಾರ್ಯ ಈ ವೇಳೆ ಹರಿಹಾಯ್ದರು. ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ, ಕಾಂಗ್ರೆಸ್ ಸದಸ್ಯರು ಇಂದಿನಿಂದ(ಮಾ.24-ಬುಧವಾರ) ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುವ ನಿರ್ಧಾರ ಕೈಗೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು.


from India & World News in Kannada | VK Polls https://ift.tt/3ffzP6V

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...