ಹೊಸದಿಲ್ಲಿ: ಇತ್ತೀಚೆಗೆ ಮುಕ್ತಯವಾಗಿದ್ದ ಇಂಗ್ಲೆಂಡ್ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 3-1 ಅಂತರದಲ್ಲಿ ಗೆದ್ದು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ಅರ್ಹತೆ ಪಡೆದಿತ್ತು. ಅದರಂತೆ ಜೂನ್ ತಿಂಗಳಲ್ಲಿ ಭಾರತ ತಂಡ, ಉದ್ಘಾಟನಾ ಆವೃತ್ತಿಯ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯದಲ್ಲಿ ವಿರುದ್ಧ ಸೆಣಸಲಿದೆ. ಭಾರತ ತಂಡ ಆಡಿದ್ದ ಆರು ಸರಣಿಗಳಲ್ಲಿ ಐದರಲ್ಲಿ ಜಯ ಸಾಧಿಸಿದೆ. ಆದರೆ, ಫೈನಲ್ನಲ್ಲಿ ಮುಖಾಮುಖಿಯಾಗಲಿರುವ ನ್ಯೂಜಿಲೆಂಡ್ ವಿರುದ್ಧ 2020ರಲ್ಲಿ ಒಂದೇ ಒಂದು ಸರಣಿಯಲ್ಲಿ ಸೋಲಿನ ಕಹಿ ಅನುಭವಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ಜೂನ್ 18 ರಿಂದ 22ರವರೆಗೆ ಸೌತಾಮ್ಟನ್ನ ಏಗಾಸ್ ಬೌಲ್ನಲ್ಲಿ ನಡೆಯಲಿದೆ. ಏಷ್ಯಾ ಕಪ್ ಟಿ20 ಟೂರ್ನಿಯು ಜೂನ್ನಲ್ಲಿ ಶ್ರೀಲಂಕಾದಲ್ಲಿ ಆಯೋಜಿಸಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನೊಂದಿಗೆ ಘರ್ಷಣೆ ತಪ್ಪಿಸಲು ಏಷ್ಯಾ ಕಪ್ ಟೂರ್ನಿಯನ್ನು ಕೆಲ ದಿನಗಳ ಹಿಂದಕ್ಕೆ ತಳ್ಳಿದರೂ ಕೋವಿಡ್-19 ಕ್ವಾರಂಟೈನ್ ನಿಯಮಗಳಿಂದ ಎರಡೂ ತಂಡಗಳ ಆಟಗಾರರು ಎರಡೂ ಸ್ಪರ್ಧೆಗಳಿಗೆ ಲಭ್ಯರಾಗಲು ಸಾಧ್ಯವಾಗುವುದಿಲ್ಲ. ಈ ಮೇಲಿನ ಕಾರಣಗಳಿಂದ ಭಾರತದ ಎರಡನೇ ತಂಡವನ್ನು ಏಷ್ಯಾ ಕಪ್ಗೆ ಕಳುಹಿಸಲಾಗುವುದು. ಅಲ್ಲದೆ, ಆಗಸ್ಟ್ನಲ್ಲಿ ಆರಂಭವಾಗಲಿರುವ ಟೆಸ್ಟ್ ಸರಣಿ ಆಡಲು ಭಾರತ ಟೆಸ್ಟ್ ತಂಡದ ಆಟಗಾರರು ಇಂಗ್ಲೆಂಡ್ನಲ್ಲಿಯೇ ಉಳಿಯಲಿದ್ದಾರೆ ಎಂದು ಹಲವು ವರದಿಗಳು ತಿಳಿಸಿವೆ. ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಹಾಗೂ ಏಷ್ಯಾ ಕಪ್ ಟೂರ್ನಿಗೆ ಸಂಭಾವ್ಯ ಆಟಗಾರರನ್ನು ತಿಳಿಸಲಾಗಿದೆ. ಭಾರತ ಟೆಸ್ಟ್ ತಂಡದ ಬೆಂಚ್ ಆಟಗಾರರು ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಮಹತ್ವದ ವೇದಿಕೆಯಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ಭಾರತ ಸಂಭಾವ್ಯ ಪ್ಲೇಯಿಂಗ್ XI ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ನಿರೀಕ್ಷೆಯಂತೆ ಇನಿಂಗ್ಸ್ ಆರಂಭಿಸಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಆಡಲಿದ್ದಾರೆ. ನಂತರದ ಸ್ಥಾನಗಳಲ್ಲಿ ಉಪ ನಾಯಕ ಅಜಿಂಕ್ಯ ರಹಾನೆ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಆಡಲಿದ್ದಾರೆ. ಸೌತಾಮ್ಟನ್ ಸ್ಪಿನ್ ಸ್ನೇಹಿ ವಿಕೆಟ್ ಆಗಿರುವ ಹಿನ್ನೆಲೆಯಲ್ಲಿ ಭಾರತ ಇಬ್ಬರು ಸ್ಪಿನ್ ಆಲ್ರೌಂಡರ್ಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಈ ವಿಭಾಗದಲ್ಲಿ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಆಡಬಹುದು. ಒಂದು ವೇಳೆ ಪಿಚ್ ಮೇಲೆ ಹುಲ್ಲು ಬೆಳೆದಿದ್ದರೆ, ಹಾರ್ದಿಕ್ ಪಾಂಡ್ಯ ಅವರನ್ನು ಅಂತಿಮ 11ಕ್ಕೆ ಕರೆತರುವ ಸಾಧ್ಯತೆ ಇದೆ. ಇನ್ನು ವೇಗದ ಬೌಲಿಂಗ್ ವಿಭಾಗದಲ್ಲಿ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಕಣಕ್ಕೆ ಇಳಿಯಬಹುದು. ಭಾರತ ತಂಡ: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿ.ಕೀ), ರವೀಂದ್ರ ಜಡೇಜಾ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ ಹಾಗೂ ಜಸ್ಪ್ರಿತ್ ಬುಮ್ರಾ. ಮೀಸಲು ಆಟಗಾರರು: ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ವೃದ್ದಿಮಾನ್ ಸಹಾ, ಮಯಾಂಕ್ ಅಗರ್ವಾಲ್ ಹಾಗೂ ಹನುಮ ವಿಹಾರಿ, ಹಾರ್ದಿಕ್ ಪಾಂಡ್ಯ. ಏಷ್ಯಾ ಕಪ್ ಟಿ20 ಟೂರ್ನಿ ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಶಿಖರ್ ಧವನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶಾನ್(ವಿ.ಕೀ), ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಲ್ ಹಾಗೂ ಟಿ ನಟರಾಜನ್. ಮೀಸಲು ಆಟಗಾರರು: ದೀಪಕ್ ಚಹರ್, ನವದೀಪ್ ಸೈನಿ, ರಾಹುಲ್ ತೇವಾಟಿಯಾ ಹಾಗೂ ವರುಣ್ ಚಕ್ರವರ್ತಿ, ಮನೀಷ್ ಪಾಂಡೆ, ಪೃಥ್ವಿ ಶಾ, ದೇವದತ್ ಪಡಿಕ್ಕಲ್.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3tGmXKI