ಕೋವಿಡ್‌ 19: ಹೊಸ ಮಾರ್ಗಸೂಚಿಯಲ್ಲಿ ಬದಲಾವಣೆ ಇಲ್ಲ, ಸುಧಾಕರ್ ಸ್ಪಷ್ಟನೆ

ಬೆಂಗಳೂರು: ಕೋವಿಡ್‌ ರಾಜ್ಯದಲ್ಲಿ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ಶನಿವಾರ ಮಾತನಾಡಿದ ಅವರು, ಏಪ್ರಿಲ್ 20ರವರೆಗೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದರು. ಕೊರೊನಾ ನಿಯಂತ್ರಣಕ್ಕಾಗಿ ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿರುವ ಸರ್ಕಾರದ ಕ್ರಮಕ್ಕೆ ಚಿತ್ರರಂಗ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ, ಈ ಕ್ರಮವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಇನ್ನು ಜಿಮ್ ಅಸೋಶಿಯೇಷನ್‌ ಕೂಡಾ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಸದ್ಯ ಆರ್ಥಿಕವಾಗಿ ಚೇತರಿಕೆ ಆಗುತ್ತಿರುವ ಸಂದರ್ಭದಲ್ಲಿ ಇಂತಹ ನಿರ್ಬಂಧ ಸರಿಯಲ್ಲ ಎಂಬುವುದು ಹಲವರ ಅಭಿಪ್ರಾಯವಾಗಿದೆ. ಈ ಹಿನ್ನಲೆ ಮಾತನಾಡಿದ ಸಚಿವರು, ಸಿನಿಮಾ ಕ್ಷೇತ್ರಕ್ಕೆ ಯಾವುದೇ ವಿನಾಯತಿ ಇಲ್ಲ. ಎರಡನೇ ಅಲೆ ಹೊಸ್ತಿಲಲ್ಲಿ ನಾವಿದ್ದೇವೆ. ಮುನ್ನೆಚ್ಚರಿಕೆ ತೆಗೆದುಕೊಳ್ಳದಿದ್ದರೆ ಬೇರೆ ದಾರಿಯಿಲ್ಲ ಎಂದರು. ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಪ್ರಕರಣ ದಾಖಲಾಗುತ್ತಿದೆ. ಬೆಂಗಳೂರಲ್ಲಿ 3 ಸಾವಿರ ಕೇಸ್ ದಾಖಲಾಗಿದೆ. ಈಗ ಕ್ರಮ‌ಕೈಗೊಳ್ಳದಿದ್ರೆ ನಿಯಂತ್ರಣ ಕಷ್ಟ ಸಾಧ್ಯ ಎಂದರು. ಹೊಸ ಮಾರ್ಗಸೂಚಿಗಳನ್ನು ಎಲ್ಲರ ಜೊತೆ ಚರ್ಚಿಸಿಯೇ ನಿರ್ಧರಿಸಿದ್ದೇವೆ. ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿಲ್ಲ ಎಂದ ಅವರು ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ವೈಜ್ಞಾನಿಕವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು. ಯಾವುದೇ ಕ್ಷೇತ್ರದ ಮೇಲೆ ನಿರ್ಬಂಧ ಹೇರಲು ಸರ್ಕಾರಕ್ಕೂ ಇಷ್ಟವಿಲ್ಲ. ಆದರೆ ಈಗ ಅನಿವಾರ್ಯವಾಗಿದೆ ಎಂದು ತಿಳಿಸಿದರು.


from India & World News in Kannada | VK Polls https://ift.tt/3fCxFyn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...