ಪೊಲೀಸ್ ಧ್ವಜ ದಿನಾಚರಣೆ: ಖಾಕಿ ಕಾರ್ಯವೈಖರಿಗೆ ಬಿಎಸ್‌ವೈ ಮೆಚ್ಚುಗೆ

ಬೆಂಗಳೂರು: ಅಪರಾಧ ತಡೆಗಟ್ಟುವಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ಪೊಲೀಸರು ಎಲ್ಲಾ ಸಂದರ್ಭಗಳಲ್ಲೂ ಶ್ರಮಿಸುತ್ತಿದ್ದಾರೆ, ಇದು ಅಭಿನಂದನಾರ್ಹ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಕೋರಮಂಗಲದ ಕೆ.ಎಸ್.ಆರ್.ಪಿ. ಪೆರೇಡ್ ಮೈದಾನದಲ್ಲಿ ಆಯೋಜಿಸಿರುವ ಪೊಲೀಸ್ ಧ್ವಜ ದಿನಾಚರಣೆ - 2021 ಹಾಗೂ ಮುಖ್ಯಮಂತ್ರಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಪ್ರಶಸ್ತಿ ಪ್ರದಾನ ಮಾಡಿ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪೊಲೀಸರು ಅಪರಾಧ ತಡೆಗಟ್ಟುವಲ್ಲಿ ಹಬ್ಬ ಹರಿದಿನ ಇಲ್ಲದೆ ಶ್ರಮಿಸುತ್ತಿದ್ದಾರೆ. ಅಪರಾಧಗಳ ಪತ್ತೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಮ್ಮ ಶ್ರಮಕ್ಕೆ ಅಭಿನಂದನೆ ಎಂದರು. ರಾಜ್ಯದಲ್ಲಿ ಕಳೆದ ಒಂದು ವರೆ ವರ್ಷದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಉತ್ತಮವಾಗಿ ಕಾಪಾಡಿಕೊಳ್ಳಲಾಗಿದೆ. ಕೆಲವೇ ಅಹಿತಕರ ಘಟನೆ ಸಂಭವಿಸಿದರೂ ಅದನ್ನು ತಮ್ಮ ರಾಜ್ಯದ ಪೊಲೀಸರು ಯಶಸ್ವಿಯಾಗಿ ಹತೋಟಿಗೆ ತಂದಿದ್ದಾರೆ ಎಂದು ಖಾಕಿ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ವ್ಯವಸ್ಥೆ ಆಧುನಿಕರಣ ಹಾಗೂ ಕ್ಷೇಮಾಭಿವೃದ್ದಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಪೊಲೀಸ್ ವಸತಿ ಗೃಹಗಳನ್ನು 2000 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೆ 100 ನೂತನ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಅತ್ಯಾಧುನಿಕ ತಂತ್ರಜ್ಞಾನ ಬಳಕೆಯೊಂದಿಗೆ ಕರಾವಳಿಯಲ್ಲಿ ರಕ್ಷಣಾ ವ್ಯವಸ್ಥೆ ಬಲ ಬಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಮುಖ್ಯಮಂತ್ರಿಗಳಿಂದ ಪೊಲೀಸ್ ಪದಕ ಪುರಸ್ಕೃತರಿಮದ ಅಭಿನಂದನೆ ಸಲ್ಲಿಸಿದ ಅವರು ಅಪರಾಧಗಳ ಸ್ವರೂಪಕ್ಕೆ ತಕ್ಕಂತೆ ಪೊಲೀಸರ ಕಾರ್ಯವೈಖರಿ ಇರಬೇಕು ಎಂದು ಸಲಹೆ ನೀಡಿದರು. ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗೌರವರಕ್ಷೆ ಸ್ವೀಕರಿಸಿದರು. ನಂತರ ಕರ್ತವ್ಯ ನಿರ್ವಹಣೆಯಲ್ಲಿ ಉತ್ತಮ ಸಾಧನೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಮೊದಲಾದವರು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/31Fe48p

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...