ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ?: ಸರ್ಕಾರಕ್ಕೆ ಕೇಳಿಸುತ್ತಿದೆಯಾ ಎಚ್‌ಡಿಕೆ 'ಬೇಡಿಕೆ'?

ಕೊರೊನಾ ಎರಡನೇ ಅಲೆ ತಡೆಟ್ಟುವಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿಕ ಕುಮಾರಸ್ವಾಮಿ ಆರೋಪಿಸುತ್ತಲೇ ಇದ್ದಾರೆ. ಇದೀಗ ಕೊರೊನಾದಿಂದ ಸಾವನ್ನಪ್ಪಿರುವವರ ಅಂತ್ಯಸಂಸ್ಕಾರಕ್ಕಾದರೂ ಸರಿಯಾದ ಜಾಗದ ವ್ಯವಸ್ಥೆ ಕಲ್ಪಿಸಿ ಎಂದು ಎಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೃತರ ಸಂಬಂಧಿಕರ ಹಿಡಿಶಾಪ ಸರ್ಕಾರಕ್ಕೆ ತಟ್ಟುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಎಚ್‌ಡಿಕೆ, ಕೊರೊನಾದಿಂದ ಮೃತಪಟ್ಟಿರುವ ವ್ಯಕ್ತಿಗಳ ಬಂಧು ಬಳಗದವರ ಯಾತನೆ ಹೇಳತೀರದಾಗಿದೆ ಎಂದು ತೀವ್ರ ದು:ಖ ತೋಡಿಕೊಂಡಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಟೀಕಿಸುವುದರ ಜೊತೆ ಜೊತೆಗೆ, ಕೊರೊನ ಅಲೆ ತಡೆಗಟ್ಟುವ ಕುರಿತು ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನೂ ನೀಡಿರುವ ಎಚ್‌ಡಿಕೆ, ಕೊರೊನಾದಿಂದ ಮೃತರಾದವರವರೊಂದಿಗೆ ಮಾನವೀಯವಾಗಿ ವರ್ತಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಖುದ್ದು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಮಾಜಿ ಮುಖ್ಯಮಂತ್ರಿ, ಸಂಪೂರ್ಣ ಲಾಕ್‌ಡೌನ್‌ಗಾಗಿ ಆಗ್ರಹಿಸುತ್ತಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದಿಂದ ಆಗುತ್ತಿದೆ ಎನ್ನಲಾದ ಅಚಾತುರ್ಯದ ಮೇಲೆ ಬೆಳಕು ಚೆಲ್ಲುತ್ತಲೇ ಇದ್ದಾರೆ. ಹಾಗಾದರೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಈ ಬಾರಿ ರಾಜ್ಯ ಸರ್ಕಾರಕ್ಕೆ ಮಾಡಿಕೊಂಡಿರುವ ಮನವಿ ಏನು ಎಂಬುದನ್ನು ಗಮನಿಸುವುದಾದರೆ..

ಕೊರೊನಾದಿಂದ ಸಾವನ್ನಪ್ಪಿರುವವರ ಅಂತ್ಯಸಂಸ್ಕಾರಕ್ಕಾದರೂ ಸರಿಯಾದ ಜಾಗದ ವ್ಯವಸ್ಥೆ ಕಲ್ಪಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೃತರ ಸಂಬಂಧಿಕರ ಹಿಡಿಶಾಪ ಸರ್ಕಾರಕ್ಕೆ ತಟ್ಟುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.


ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ?: ಸರ್ಕಾರಕ್ಕೆ ಕೇಳಿಸುತ್ತಿದೆಯಾ ಎಚ್‌ಡಿಕೆ 'ಬೇಡಿಕೆ'?

ಕೊರೊನಾ ಎರಡನೇ ಅಲೆ ತಡೆಟ್ಟುವಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿಕ ಕುಮಾರಸ್ವಾಮಿ ಆರೋಪಿಸುತ್ತಲೇ ಇದ್ದಾರೆ. ಇದೀಗ ಕೊರೊನಾದಿಂದ ಸಾವನ್ನಪ್ಪಿರುವವರ ಅಂತ್ಯಸಂಸ್ಕಾರಕ್ಕಾದರೂ ಸರಿಯಾದ ಜಾಗದ ವ್ಯವಸ್ಥೆ ಕಲ್ಪಿಸಿ ಎಂದು ಎಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೃತರ ಸಂಬಂಧಿಕರ ಹಿಡಿಶಾಪ ಸರ್ಕಾರಕ್ಕೆ ತಟ್ಟುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಎಚ್‌ಡಿಕೆ, ಕೊರೊನಾದಿಂದ ಮೃತಪಟ್ಟಿರುವ ವ್ಯಕ್ತಿಗಳ ಬಂಧು ಬಳಗದವರ ಯಾತನೆ ಹೇಳತೀರದಾಗಿದೆ ಎಂದು ತೀವ್ರ ದು:ಖ ತೋಡಿಕೊಂಡಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಟೀಕಿಸುವುದರ ಜೊತೆ ಜೊತೆಗೆ, ಕೊರೊನ ಅಲೆ ತಡೆಗಟ್ಟುವ ಕುರಿತು ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನೂ ನೀಡಿರುವ ಎಚ್‌ಡಿಕೆ, ಕೊರೊನಾದಿಂದ ಮೃತರಾದವರವರೊಂದಿಗೆ ಮಾನವೀಯವಾಗಿ ವರ್ತಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಖುದ್ದು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಮಾಜಿ ಮುಖ್ಯಮಂತ್ರಿ, ಸಂಪೂರ್ಣ ಲಾಕ್‌ಡೌನ್‌ಗಾಗಿ ಆಗ್ರಹಿಸುತ್ತಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದಿಂದ ಆಗುತ್ತಿದೆ ಎನ್ನಲಾದ ಅಚಾತುರ್ಯದ ಮೇಲೆ ಬೆಳಕು ಚೆಲ್ಲುತ್ತಲೇ ಇದ್ದಾರೆ. ಹಾಗಾದರೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಈ ಬಾರಿ ರಾಜ್ಯ ಸರ್ಕಾರಕ್ಕೆ ಮಾಡಿಕೊಂಡಿರುವ ಮನವಿ ಏನು ಎಂಬುದನ್ನು ಗಮನಿಸುವುದಾದರೆ..



'ಗೌರವಯುತ ಅಂತ್ಯಸಂಸ್ಕಾರಕ್ಕಾದರೂ ಅವಕಾಶ ಕಲ್ಪಿಸಿ'!
'ಗೌರವಯುತ ಅಂತ್ಯಸಂಸ್ಕಾರಕ್ಕಾದರೂ ಅವಕಾಶ ಕಲ್ಪಿಸಿ'!

ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ವ್ಯವಸ್ಥಿತವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸರ್ಕಾರ ಅಂತ್ಯಸಂಸ್ಕಾರಕ್ಕಾದರೂ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು

ಟ್ವೀಟ್

ಮಾಡಿರುವ ಎಚ್‌ಡಿಕೆ, ''ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ'' ಎಂದು ಕಿಡಿಕಾರಿದ್ದಾರೆ.

ಇದು ಮೂರ್ಖ ಸರ್ಕಾರ, ಇನ್ನೂ ಬುದ್ಧಿ ಬಂದಿಲ್ಲ, ಎಚ್‌ಡಿಕೆ ಕಿಡಿ

ಕೊರೊನಾ ಪೀಡಿತರ ಅಂತ್ಯಸಂಸ್ಕಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ, ರಾಜ್ಯ ಸರ್ಕಾರ ಮಾನವೀಯತೆ ಮೆರೆಯಬೇಕು ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.



'ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿ'!
'ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿ'!

ಹೌದು, ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಈ ಕುರಿತು ಸರ್ಕಾರಕ್ಕೆ ಸೂಕ್ತ ಸಲಹೆಯನ್ನೂ ನೀಡಿದ್ದಾರೆ.

ಈ ಕುರಿತು

ಟ್ವೀಟ್

ಮಾಡಿರುವ ಎಚ್‌ಡಿಕೆ, ''ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು

ಸರಕಾರ

ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ'' ಎಂದು ಹೇಳಿದ್ದಾರೆ.

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಏನು ಕ್ರಮ ಕೈಗೊಳ್ಳಲಾಗಿದೆ? - ಸರಕಾರಕ್ಕೆ ಎಚ್‌ಡಿಕೆ ತರಾಟೆ

''ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು'' ಎಂದು ಮಾಜಿ ಸಿಎಂ ಆಗ್ರಹಿಸಿದ್ದಾರೆ.



'ಆಕ್ಸಿಜನ್ ಕೊಡದ ಸರ್ಕಾರ, ಅಂತ್ಯಕ್ರಿಯೆಯನ್ನಾದರೂ ಸರಿಯಾಗಿ ಮಾಡಲಿ'!
'ಆಕ್ಸಿಜನ್ ಕೊಡದ ಸರ್ಕಾರ, ಅಂತ್ಯಕ್ರಿಯೆಯನ್ನಾದರೂ ಸರಿಯಾಗಿ ಮಾಡಲಿ'!

ರಾಜ್ಯ ಸರ್ಕಾರ ಕೊರೊನಾ ಪೀಡಿತರ ಚಿಕಿತ್ಸೆಗೆ ಸರಿಯಾ ವ್ಯವಸ್ಥೆ ಮಾಡಿಲ್ಲ. ಸೂಕ್ತ ಬೆಡ್, ಆಕ್ಸಿಜನ್, ವೆಂಟಿಲೇಟರ್‌ಗಳಿಲ್ಲದೇ ಜನರು ಪರದಾಡುತ್ತಿದ್ದಾರೆ ಎಂದು ಎಚ್‌ಡಿಕೆ ಹರಿಹಾಯ್ದಿದ್ದಾರೆ.

ಈ ಕುರಿತು

ಟ್ವೀಟ್

ಮಾಡಿರುವ ಎಚ್‌ಡಿಕೆ, ''ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ'' ಎಂದು ಒತ್ತಾಯಿಸಿದ್ದಾರೆ.

ಸಾವಿನ ಮನೆಯಲ್ಲಿ ಇರೋವಾಗ ಇದೆಲ್ಲ ಬೇಕಾ?: ಎಚ್‌ಡಿಕೆ ಕೆಂಡಾಮಂಡಲ

''ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ

ಸರಕಾರ

ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು'' ಎಂದು ಎಚ್‌ಡಿಕೆ ಸಲಹೆ ನೀಡಿದ್ದಾರೆ.



'ಜನರ ಹಿಡಿಶಾಪ ರಾಜ್ಯ ಸರ್ಕಾರಕ್ಕೆ ತಟ್ಟದೇ ಇರದು'!
'ಜನರ ಹಿಡಿಶಾಪ ರಾಜ್ಯ ಸರ್ಕಾರಕ್ಕೆ ತಟ್ಟದೇ ಇರದು'!

ಕೊರೊನಾ ಅಲೆ ತಡೆಗಟ್ಟುವಲ್ಲಿ ರಾಜ್ಯ ಸರ್ಕಾರದ ವೈಫಲ್ಯಕ್ಕೆ ರಾಜ್ಯದ ಜನ ರೋಸಿ ಹೋಗಿದ್ದಾರೆ, ಇದೀಗ ಅಂತ್ಯಸಂಸ್ಕಾರಕ್ಕೂ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ, ಜನ ರಾಜ್ಯ ಸರ್ಕಾರಕ್ಕೆ ಹಿಡಿಶಾಪ ಹಾಕಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಈ ಕುರಿತು

ಟ್ವೀಟ್

ಮಾಡಿರುವ ಎಚ್‌ಡಿಕೆ, ''ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ'' ಎಂದು ನೋವಿನಿಂದ ನುಡಿದಿದ್ದಾರೆ.

ಕೋವಿಡ್‌ ಪಾಸಿಟಿವ್‌ ಆದ ಎಚ್‌ಡಿಕೆಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ!

ಕೊನೆಯಲ್ಲಿ

ಅಲ್ಲಮಪ್ರಭು

ವಚನವನ್ನು ಉಲ್ಲೇಖಿಸಿರುವ ಎಚ್‌ಡಿ ಕುಮಾರಸ್ವಾಮಿ, ಈಗಲಾದರೂ ರಾಜ್ಯ ಸರ್ಕಾರ ಎಚ್ಚರಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





from India & World News in Kannada | VK Polls https://ift.tt/2PkHWo8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...