ಕೋವಿಡ್‌ ಆತಂಕ: ರಾಜ್ಯಪಾಲರ ನೇತೃತ್ವದ ಸರ್ವಪಕ್ಷಗಳ ಸಭೆಯ ಬಳಿಕ ಕಠಿಣ ರೂಲ್ಸ್ ಜಾರಿ!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಆತಂಕ ತೀವ್ರಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯಪಾಲ ವಜೂಭಾಯಿ ವಾಲಾ ಅವರ ನೇತೃತ್ವದಲ್ಲಿ ಸರ್ವಪಕ್ಷಗಳ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿದ್ದು ಇದಾದ ಬಳಿಕ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೊಸ ಮಾರ್ಗಸೂಚಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಮಂಗಳವಾರ ಸಂಜೆ 4.30 ಗೆ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ನ ಎಚ್‌ಡಿ ರೇವಣ್ಣ ಹಾಗೂ ಉಭಯ ಸದನಗಳ ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ವಿರೋಧ ಪಕ್ಷಗಳ ಸಲಹೆಗಳನ್ನು ಸರ್ಕಾರ ಪಡೆದುಕೊಳ್ಳಲಿದೆ. ಇದಾದ ಬಳಿಕ ಒಂದು ಸೂಕ್ತ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸರ್ವಪಕ್ಷಗಳ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಸೋಮವಾರ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಸಭೆ ನಡೆದಿತ್ತು. ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಈ ಎಲ್ಲಾ ಸಲಹೆಗಳನ್ನು ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಗಮನಿಸಿದ್ದು ಸರ್ವ ಪಕ್ಷಗಳ ಸಭೆಯಲ್ಲೂ ಬರುವ ಸಲಹೆಗಳನ್ನು ಪಡೆದುಕೊಂಡು ಮಂಗಳವಾರ ಅಥವಾ ಬುಧವಾರ ಸರ್ಕಾರ ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ಬಹುತೇಕ ಜನರು ಲಾಕ್‌ಡೌನ್‌ಗೆ ವಿರೋಧ ವ್ಯಕ್ತಪಡಿಸಿದ್ದು ಲಾಕ್‌ಡೌನ್‌ ಪರ್ಯಾಯವಾಗಿ ಕೆಲವೊಂದು ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಚಿಂತನೆಯನ್ನು ಸರ್ಕಾರ ನಡೆಸುತ್ತಿದೆ ಎಂದು ತಿಳಿದುಬಂದಿದೆ.


from India & World News in Kannada | VK Polls https://ift.tt/3eh5pyP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...