ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಪ್ರಭಾವ ಹೆಚ್ಚಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ದೇಶದ ಪ್ರಮುಖ ವೈರಾಲಜಿಸ್ಟ್ ಗಳ ಪೈಕಿ ಒಬ್ಬರಾಗಿರುವ ಕರ್ನಾಟಕ ಸರ್ಕಾರ ರಚಿಸಿರುವ ತಾಂತ್ರಿಕ ಸಲಹಾ ಸಮಿತಿ ಸದಸ್ಯರಾಗಿರುವ ಡಾ. ವಿ. ರವಿ ಹೇಳಿದ್ದಾರೆ. ಈ ಕುರಿತಾಗಿ ವಿಡಿಯೋ ಮೂಲಕ ಎಚ್ಚರಿಕೆ ನೀಡಿರುವ ಅವರು, ಮಾರ್ಚ್ ತಿಂಗಳ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಎರಡನೇ ಅಲೆಯ ಪ್ರಭಾವ ಹೆಚ್ಚಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿರ್ಬಂಧಗಳ ಪಾಲನೆ ಅಗತ್ಯ ಎಂದಿದ್ದಾರೆ. ಜನರ ಒಳ್ಳೆಯದಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಸಾರ್ವಜನಿಕ ಸ್ಥಳದಲ್ಲಿ ಕೋವಿಡ್ ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಜನರ ಸಹಕಾರ ಇದ್ದರೆ ಎರಡನೇ ಅಲೆ ನಿಯಂತ್ರಣ ಸಾಧ್ಯ ಎಂದಿದ್ದಾರೆ. ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮಾಸ್ಕ್ ಕಡ್ಡಾಯವಾಗಿ ಬಳಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಅವರು ಜನರಲ್ಲಿ ಮನವಿ ಮಾಡಿದ್ದಾರೆ. ಸದ್ಯ ರಾಜ್ಯ ಸರ್ಕಾರ ಕೈಗೊಂಡಿರುವ ಕೆಲವು ಕ್ರಮಗಳ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮಾರ್ಗಸೂಚಿ ಪರಿಷ್ಕರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ಇದರಿಂದ ಆರ್ಥಿಕವಾಗಿ ಮತ್ತಷ್ಟು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ತಜ್ಞರು ಈ ರೀತಿಯ ಎಚ್ಚರಿಕೆಯನ್ನು ಕೊಟ್ಟಿದ್ದು ಸರ್ಕಾರದ ನಡೆ ಸರಿಯಾಗಿದೆ ಎಂದಿದ್ದಾರೆ.
from India & World News in Kannada | VK Polls https://ift.tt/3rHJa9T