ಕೋವಿಡ್‌ ಆತಂಕ: ಕುತೂಹಲಕ್ಕೆ ಕಾರಣವಾಗಿದೆ ಬಿಎಸ್‌ವೈ‌ ಕರೆದ ತುರ್ತು ಸಭೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಆತಂಕ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ತುರ್ತು ಸಭೆಯನ್ನು ಕರೆದಿದ್ದಾರೆ. ಶುಕ್ರವಾರ ಬೆಳಗ್ಗೆ 9.30ಗಂಟೆಗೆ ಸಭೆ ನಡೆಯಲಿದ್ದು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋವಿಡ್‌ ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಗುರುವಾರ 14,738 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 11 ಲಕ್ಷ ಗಡಿ ದಾಟಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಜೊತೆಗೆ ಕೆಲವೊಂದು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ. ಹೀಗಿದ್ದರೂ ಕೋವಿಡ್ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಕರೆದಿರುವ ತುರ್ತು ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಭಾನುವಾರ ಸರ್ವ ಪಕ್ಷದ ಮುಖಂಡರ ಜೊತೆಗೆ ಸಿಎಂ ಬಿಎಸ್‌ವೈ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ವಿರೋಧ ಪಕ್ಷಗಳ ಸಲಹೆಗಳನ್ನು ಪಡೆದುಕೊಳ್ಳಲಿದ್ದಾರೆ. ಇದಾದ ಬಳಿಕ ಕೆಲವೊಂದು ನಿಯಮಾವಳಿಗಳು ಜಾರಿಗೊಳಿಸುವ ಸಾಧ್ಯತೆ ಇದೆ. ಸದ್ಯ ಲಾಕ್‌ಡೌನ್ ಹಾಗೂ ಮಿನಿ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲ ಎಂದು ಸಿಎಂ ಹಾಗೂ ಸಚಿವರುಗಳು ಸ್ಪಷ್ಟಪಡಿಸಿದರೂ ನೈಟ್‌ ಕರ್ಫ್ಯೂವನ್ನು ಮತ್ತಷ್ಟು ನಗರಗಳಿಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ. ಒಟ್ಟಿನಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿ ಹಾಗೂ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತುರ್ತು ಸಭೆಯಲ್ಲಿ ಸಿಎಂ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಚಿವವಾರ ಡಾ. ಕೆ ಸುಧಾಕರ್ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.


from India & World News in Kannada | VK Polls https://ift.tt/3emhHpV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...