ಬೆಂಗಳೂರು: ಲಾಕ್ಡೌನ್ ಬಗ್ಗೆ ದ್ವಂದ್ವ ಹೇಳಿಕೆಯನ್ನು ಸರ್ಕಾರ ನೀಡಬಾರದು ಎಂದು ಆಗ್ರಹ ಮಾಡಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದೆ. ಲಾಕ್ಡೌನ್ ಬಗ್ಗೆ ಸರ್ಕಾರ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ದ್ವಂಧ್ವ ಹೇಳಿಕೆಗಳನ್ನು ನೀಡದೆ ಸ್ಪಷ್ಟ ಸಂದೇಶವನ್ನು ರಾಜ್ಯಕ್ಕೆ ನೀಡಬೇಕು ಎಂದು ಆಗ್ರಹಿಸಿದೆ. ಲಾಕ್ಡೌನ್ ಕೊರೊನಗಿಂತಲೂ ಭೀಕರವಾದುದು ಎನ್ನುವ ಕಹಿಸತ್ಯ ಹಿಂದಿನ ಅನುಭವದಿಂದ ತಿಳಿದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪೆನಿಗಳವರೆಗೆ ಲಾಕ್ಡೌನ್ಗೆ ಒಗ್ಗುವುದು ಕಷ್ಟಕರವಾಗಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿದೆ. ರಾಜ್ಯದಲ್ಲಿ ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಗುರುವಾರ 14,738 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 11 ಲಕ್ಷ ಗಡಿ ದಾಟಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಕೆಲವೊಂದು ಕಠಿಣ ಕ್ರಮಗಳನ್ನು ಸರ್ಕಾರ ಕೈಗೊಳ್ಳಲು ಮುಂದಾಗಿದೆ. ಈ ವಿಚಾರವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ತುರ್ತು ಸಭೆಯನ್ನು ನಡೆಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ ಅದರಲ್ಲಿ ಸ್ಪಷ್ಟತೆ ಇಲ್ಲ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಟ್ವೀಟ್ ಮಹತ್ವ ಪಡೆದುಕೊಂಡಿದೆ. ದ್ವಂದ್ವ ಬಿಟ್ಟು ಸ್ಪಷ್ಟವಾಗಿ ಲಾಕ್ಡೌನ್ ಬಗ್ಗೆ ತಿಳಿಸಿ ಎಂದು ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ ಮಾಡಿದೆ.
from India & World News in Kannada | VK Polls https://ift.tt/3dj8oaO