ಲಖನೌ: ಕುಖ್ಯಾತ ಅಪರಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದೆ. ಈ ಕುರಿತು ಉತ್ತರಪ್ರದೇಶ ಸರ್ಕಾರಕ್ಕೆ ವರದಿ ಹಸ್ತಾಂತರಿಸಿರುವ ವಿಚಾರಣಾ ಆಯೋಗ, ರಾಜ್ಯ ಪೊಲೀಸರಿಂದ ನಕಲಿ ಎನ್ಕೌಂಟರ್ ನಡೆದಿದೆ ಎಂಬುದಕ್ಕೆ ಯಾವುದೇ ಸಾಕ್ಷಿಗಳು ಲಭ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಕಾಸ್ ದುಬೆಯನ್ನು ನಕಲಿ ಎನ್ಕೌಂಟರ್ನಲ್ಲಿ ಹೊಡೆದುರುಳಿಸಲಾಗಿದೆ ಎಂದು ಆರೋಪಿಸಿದ್ದ ಕೆಲವು ಮಾಧ್ಯಮಗಳು ಹಾಗೂ ಗ್ಯಾಂಗ್ಸ್ಟರ್ನ ಕುಟುಂಬಸ್ಥರು ಈ ಕುರಿತು ಸಾಕ್ಷಿಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ವಿಚಾರಣಾ ಆಯೋಗ ತನ್ನ ವರದಿಯಲ್ಲಿ ಹೇಳಿದೆ. ಎನ್ಕೌಂಟರ್ನ ಪೊಲೀಸ್ ಆವೃತ್ತಿಯನ್ನು ಖಂಡಿಸಲು ಯಾವುದೇ ಸೂಕ್ತ ಪುರಾವೆಗಳಿಲ್ಲ. ಆದರೆ ಅದನ್ನು ಬೆಂಬಲಿಸಲು ಸಾಕಷ್ಟು ಪುರಾವೆಗಳಿವೆ ಎಂದು ಮೂವರು ಸದಸ್ಯರ ವಿಚಾರಣಾ ಸಮಿತಿಯು, ಉತ್ತರ ಪ್ರದೇಶ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ಎನ್ಕೌಂಟರ್ನಲ್ಲಿ ಎಂಟು ಜನ ಪೊಲೀಸರನ್ನು ಹತ್ಯೆಗೈದು ಪರಾರಿಯಾಗಿದ್ದ ವಿಕಾಸ್ ದುಬೆನನ್ನು, ಮಧ್ಯಪ್ರದೇಶದಲ್ಲಿ ಯುಪಿ ಪೊಲೀಸರು ಬಂಧಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಆತನನನ್ನು ರಾಜ್ಯಕ್ಕೆ ಕರೆತರುವ ಮಧ್ಯದಲ್ಲಿ ಪೊಲೀಸ್ ವಾಹನ ಪಲ್ಟಿಯಾಗಿದ್ದರಿಂದ ವಿಕಾಸ್ ದುಬೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆದರೆ ಯುಪಿ ಪೊಲೀಸರು ಅತನನ್ನು ಎನ್ಕೌಂಟರ್ನಲ್ಲಿ ಹೊಡೆದುರುಳಿಸಿದ್ದರು. ವಿಕಾಸ್ ದುಬೆನನ್ನು ನಕಲಿ ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಮತ್ತು ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ವಿಚಾರಣಾ ಆಯೋಗವನ್ನು ರಚಿಸಿತ್ತು. ಇದೀಗ ಈ ವಿಚಾರಣಾ ಆಯೋಗ ತನ್ನ ವರದಿಯನ್ನು ಸಲ್ಲಿಸಿದ್ದು, ಯುಪಿ ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದೆ.
from India & World News in Kannada | VK Polls https://ift.tt/3n7Pozl