ಕೋವಿಡ್‌ ಹೆಚ್ಚಾಗುತ್ತಿದೆ, ಎಚ್ಚರಿಕೆಯಿಂದಿರಿ; ಬಿಎಸ್‌ವೈ ಮನವಿ

ಬೆಂಗಳೂರು: ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಮನೆಯಲ್ಲಿ ಮೂರು ನಾಲ್ಕು ಜನರಿಗೆ ಕೋವಿಡ್ ಸೋಂಕು ತಗಲುತ್ತಿದೆ. ಇದಕ್ಕೆ ಒಂದೇ ಒಂದು ಪರಿಹಾರ ಮಾಸ್ಕ್, ಸಾಮಾಜಿಕ ಅಂತರ ಕಾಯುವುದು ಹಾಗೂ ಸ್ಯಾನಿಟೈಸ್‌ ಬಳಸುವುದು ಎಂದರು. ಇದು ಬಿಟ್ಟು ಬೇರೆ ಮಾರ್ಗ ಇಲ್ಲ, ರಾಜ್ಯದ ಜನರಿಲ್ಲಿ ಪ್ರಾರ್ಥನೆ ಮಾಡುತ್ತೇನೆ, ಅನಗತ್ಯವಾಗಿ ರಸ್ತೆಯಲ್ಲಿ ಓಟಾಟ ಮಾಡಬೇಡಿ. ಇದರಿಂದ ಕೋವಿಡ್ ಉಲ್ಬಣಗೊಳ್ಳುತ್ತಿದೆ. ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಾರಿಗೊಂಡ ನಿಯಮಗಳನ್ನು ಚಾಲ್ತಿಗೆ ತರುವ ನಿಟ್ಟಿನಲ್ಲಿ ಪೊಲೀಸರು ಬಿಗಿಯಾದ ಕ್ರಮ ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು. ಎಲ್ಲ ಸಚಿವರ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ. ಬಿಗಿಯಾದ ಕ್ರಮವನ್ನು ಕೈಗೊಂಡಿದ್ದೇವೆ ಕಟ್ಟುನಿಟ್ಟಿನಲ್ಲಿ ಪಾಲನೆ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


from India & World News in Kannada | VK Polls https://ift.tt/3tCb88S

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...