ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಆತಂಕ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶುಕ್ರವಾರ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತುರ್ತು ಸಭೆಯಲ್ಲಿ ಯಾವುದೇ ನಿರ್ಧಾರಗಳನ್ನು ಕೈಗೊಂಡಿಲ್ಲ. ಈ ಕುರಿತಾಗಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಸಭೆಯ ಬಳಿಕ ಮಾತನಾಡಿದ ಅವರು, ಏಪ್ರಿಲ್ 20 ರ ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ ಮಾಡಲಾಗುವುದು. 20 ರ ಬಳಿಕ ಮುಂದಿನ ನಡೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ತಜ್ಞರ ಜೊತೆ ಚರ್ಚೆ ಮಾಡಲಾಗಿದೆ. ಜಾರಿಯಲ್ಲಿರುವ ನೈಟ್ ಕರ್ಫ್ಯೂವನ್ನು ಬೇರೆ ಜಿಲ್ಲೆಗಳಲ್ಲಿ ಮುಂದುವರಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದರು. ಯಥಾಸ್ಥಿತಿ ಮುಂದುವರಿಕೆ ಸದ್ಯಕ್ಕೆ ಜಾರಿಯಲ್ಲಿರುವ ನಿಯಮಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ತುರ್ತು ಸಭೆಯಲ್ಲಿ ಅಧಿಕಾರಿಗಳಿಂದ ಎಲ್ಲಾ ಮಾಹಿತಿ ಪಡೆದುಕೊಂಡಿದ್ದೇನೆ. ಆದ್ಯತೆ ಮೇರೆಗೆ ಚರ್ಚೆ ಮಾಡಲಾಗಿದೆ ಎಂದರು. ಇನ್ನು ಮಹಾರಾಷ್ಟ್ರ ದೆಹಲಿಯಲ್ಲಿ ಕಠಿಣ ನಿಯಮಾವಳಿಗಳ ಜಾರಿ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯವನ್ನು ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಲು ಹೋಈಗಬೇಡಿ. ಸದ್ಯ ಏಪ್ರಿಲ್ 20 ನೇ ತಾರೀಕಿನವರೆಗೆ ಏನೂ ಬದಲಾವಣೆ ಇಲ್ಲ, ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
from India & World News in Kannada | VK Polls https://ift.tt/3dpnhZk