ಆರ್‌ಸಿಬಿಯಲ್ಲಿದ್ದ ದೊಡ್ಡ ಸಮಸ್ಯೆ ಇದೀಗ ಬಗೆಹರಿದಿದೆ ಎಂದ ಪೀಟರ್ಸನ್!

ಮುಂಬೈ: ಪ್ರಸ್ತುತ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಂಡದ ಬೌಲರ್‌ಗಳ ಪ್ರದರ್ಶನದ ಬಗ್ಗೆ ಆರ್‌ಸಿಬಿ ನಾಯಕ ಆರಾಮದಾಯಕ ಭಾವನೆ ಹೊಂದಿದ್ದಾರೆಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2021ರ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದ ಆರ್‌ಸಿಬಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಸ್ಟಾರ್‌ಸ್ಪೋರ್ಟ್ಸ್‌ ಪ್ರೀ ಶೋ ಕ್ರಿಕೆಟ್‌ ಲೈವ್‌ನಲ್ಲಿ ಮಾತನಾಡಿದ ಪೀಟರ್ಸನ್‌, "ತುಂಬಾ ದಿನಗಳಿಂದ ಈ ತರಹ ಬೌಲಿಂಗ್‌ ವಿಭಾಗಕ್ಕೋಸ್ಕರ ಆರ್‌ಸಿಬಿ ತುಂಬಾ ಹೆಣಗಾಡಿತ್ತು. ಡೇಲ್‌ ಸ್ಟೇನ್‌ ಬಗ್ಗೆ ಈ ಹಿಂದೆ ಹೇಳಿದ್ದೆ, ಮಿಚೆಲ್‌ ಸ್ಟಾರ್ಕ್‌ ಕೂಡ ಬಂದು ಹೋಗಿದ್ದರು. ಆದರೆ, ಇದೀಗ ಕೈಲ್‌ ಜೇಮಿಸನ್‌ ಹಾಗೂ ಮೊಹಮ್ಮದ್‌ ಸಿರಾಜ್‌ ಅವರನ್ನೊಳಗೊಂಡ ಆರ್‌ಸಿಬಿ ಬೌಲಿಂಗ್‌ ವಿಭಾಗ ಆರಾಮಾದಾಯಕವಾಗಿದೆ," ಎಂದು ಹೇಳಿದರು. "ಈ ಹಿಂದೆ ಯುಜ್ವೇಂದ್ರ ಚಹಲ್‌ ಮೇಲೆ ಸಾಕಷ್ಟು ಒತ್ತಡವಿತ್ತು. ಬೌಲಿಂಗ್‌ ವಿಭಾಗದ ಜವಾಬ್ದಾರಿ ಎಲ್ಲವೂ ಇವರ ಮೇಲಿತ್ತು. ಆದರೆ, 3 ಅಥವಾ 4ನೇ ಓವರ್‌ನಲ್ಲಿ ಬೌಲಿಂಗ್‌ ಮಾಡುವ ಸ್ಪಿನ್ನರ್ ಅವರಲ್ಲ. ಇದೀಗ ಅವರ ಮೇಲಿನ ಒತ್ತಡ ಕಡಿಮೆಯಾಗಿದೆ. ಇದೀಗ ಬೌಲಿಂಗ್‌ ವಿಭಾಗದ ಬಗ್ಗೆ ವಿರಾಟ್‌ ಕೊಹ್ಲಿ ತಲೆ ಬಿಸಿ ಮಾಡಿಕೊಳ್ಳುವ ಅಗತ್ಯವಿಲ್ಲ. ಆದರೆ, ಇನ್ನು ಬೌಲಿಂಗ್‌ ಲೈನ್‌ ಅಪ್‌ನಲ್ಲಿ ಆಡಂ ಝಾಂಪ, ಕೇನ್‌ ರಿಚರ್ಡ್ಸನ್‌ ಹಾಗೂ ಡೇನಿಯಲ್‌ ಸ್ಯಾಮ್ಸ್‌ ಇದ್ದಾರೆ," ಎಂದು ಪೀಟರ್ಸನ್‌ ತಿಳಿಸಿದರು. ಅದ್ಭುತ ಫಾರ್ಮ್‌ನಲ್ಲಿರುವ ಗ್ಲೆನ್‌ ಮ್ಯಾಕ್ಸ್‌ವೆಲ್‌ ನಾಯಕ ವಿರಾಟ್‌ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್‌ಗೆ ಮಧ್ಯಮ ಕ್ರಮಾಂಕದಲ್ಲಿ ಅದ್ಭುತವಾಗಿ ಸಾಥ್‌ ನೀಡುತ್ತಿದ್ದಾರೆ. ಇದನ್ನು ಗಮನಿಸಿದ ಪೀಟರ್ಸನ್‌, ಆರ್‌ಸಿಬಿ ಬ್ಯಾಟಿಂಗ್‌ ವಿಭಾಗ ನೋಡಲು ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ. "ಆರ್‌ಸಿಬಿ ತಂಡದ ಮತ್ತೊಂದು ಪ್ರಮುಖ ಅಂಶವನ್ನು ನಾನು ಹೇಳಲು ಬಯಸುತ್ತೇನೆ. ಏನೆಂದರೆ, ಈ ಬಾರಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಬೌಲಿಂಗ್‌ ವಿಭಾಗ ಅದ್ಭುತವಾಗಿದೆ. ವಿರಾಟ್ ಕೊಹ್ಲಿ ತಮ್ಮ ಬೌಲರ್‌ಗಳಲ್ಲಿ ಸಂಯೋಜನೆಗಾಗಿ ತೀವ್ರವಾಗಿ ಹುಡುಕುತ್ತಿದ್ದಾರೆ. ಅಷ್ಟರ ಮಟ್ಟಿಗೆ ಈಗ ಬೌಲಿಂಗ್‌ ಆಯ್ಕೆಗಳಿವೆ," ಎಂದರು. "ನಾಯಕ ವಿರಾಟ್‌ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಜೊತೆಗೆ ಇದೀಗ ಗ್ಲೆನ್‌ ಮ್ಯಾಕ್ಸ್‌ವೆಲ್‌ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ದೇವದತ್‌ ಪಡಿಕ್ಕಲ್ ಕೂಡ ಮ್ಯಾಚ್‌ ವಿನ್ನಿಂಗ್ ಪ್ರದರ್ಶನವನ್ನು ನೀಡುತ್ತಿದ್ದಾರೆ. ಹಾಗಾಗಿ, ಆರ್‌ಸಿಬಿ ಬ್ಯಾಟಿಂಗ್ ವಿಭಾಗ ಅತ್ಯುತ್ತಮವಾಗಿದೆ," ಎಂದು ಆರ್‌ಸಿಬಿ ಮಾಜಿ ಆಟಗಾರ ಕೆವಿನ್‌ ಪೀಟರ್ಸನ್‌ ಹೇಳಿದರು. ವಿರಾಟ್‌ ಕೊಹ್ಲಿ ನಾಯಕತ್ವದ ಆರ್‌ಸಿಬಿ ಭಾನುವಾರ ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೂರ್ನಿಯ ತನ್ನ ಐದನೇ ಪಂದ್ಯದಲ್ಲಿ ಸೆಣಸಲು ಸಜ್ಜಾಗುತ್ತಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3gxjStn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...